April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿವೃತ್ತ ಸೇನಾನಿ ಅನೀಶ್ ಡಿ.ಎಲ್‌ ರವರಿಗೆ ಬೆಳ್ತಂಗಡಿಯಲ್ಲಿ ಅದ್ದೂರಿಯ ಸ್ವಾಗತ

ಬೆಳ್ತಂಗಡಿ : ಕಳೆದ 20 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿ ಆಗಮಿಸಿದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ ನೀಡಲಾಯಿತು.

ನಿವೃತ್ತ ಅನೀಶ್ ಡಿ.ಎಲ್ ಅವರನ್ನು ತೆರೆದ ಜೀಪಿನಲ್ಲಿ ಮೆರವಣಿಗೆಯ ಮೂಲಕ ಅವರನ್ನು ಭವ್ಯ ಸ್ವಾಗತದೊಂದಿಗೆ ಸ್ವಾಗತಿಸಲಾಯಿತು.

ಈ ಸಂದರ್ಭದಲ್ಲಿ ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಮಹಮ್ಮದ್ ರಫಿ, ಬೆಳ್ತಂಗಡಿ ಇನ್ಸ್ ಪೆಕ್ಟರ್ ಸುಬ್ಭಾಪುರ ಮಠ್ ಸೇರಿದಂತೆ ಗಣ್ಯರು ಪುಷ್ಪ ಗುಚ್ಚನೀಡಿ ಅವರನ್ನು ಸ್ವಾಗತಿಸಿದರು.

ಕೆ.ಎಸ್. ಎಂ.ಸಿ ಎ ಧರ್ಮಸ್ಥಳ ವಲಯ ಅಧ್ಯಕ್ಷ ಜೈಸನ್ ಪಟ್ಟೇರಿ, ಬೆಳ್ತಂಗಡಿ ಸಿರಿಯನ್ ಕಥೋಲಿಕ್ ವಿವಿದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಅನಿಲ್ ಎ.ಜೆ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್, ಹಿರಿಯ ಮುಖಂಡರಾದ ರಾಜಶೇಖರ ಅಜ್ರಿ, ಭರತ್ ಬಂಗಾಡಿ, ವಿವಿಧ ಸಂಘಟನೆಗಳ ಮುಖಂಡರುಗಳಾದ ರೋಯಿ ಪುದುವೆಟ್ಟು, ಜಾರ್ಜ್ ಕಾಂಜಾಲ್, ದಾಯಾನಂದ ಬೆಳಾಲು, ರೋಬಿನ್ ಓಡಂಪಳ್ಳಿ, ರೆಜಿ ಬೆಳ್ತಂಗಡಿ, ಅಜಯ್ ಎ.ಜೆ, ಬಿ.ಕೆ ವಸಂತ್, ಸೆಬಾಸ್ಟಿಯನ್ ಬಂಗಾಡಿ, ಶೇಖರ ಲಾಯಿಲ, ಜೇಮ್ಸ್ ಕೆ.ಜೆ, ಹಾಗೂ ಇತರರು ಇದ್ದರು.

Related posts

ಕೊಕ್ಕಡ: ಮಜ್ದೂರ್ ಸಂಘದ ಕೊಕ್ಕಡ ವಲಯದ ನೂತನ ಕಛೇರಿಯ ಉದ್ಘಾಟನೆ

Suddi Udaya

ಅನಧಿಕೃತವಾಗಿ ಕಟ್ಟಡ ನಿರ್ಮಿಸುತ್ತಿದ್ದು ಸ್ಥಳ ಪರಿಶೀಲನೆ ವೇಳೆ ಗ್ರಾಮ ಆಡಳಿತ ಅಧಿಕಾರಿಯ ಮೇಲೆ ಹಲ್ಲೆ ಆರೋಪ: ಹಲ್ಲೆ ಮಾಡಿರುವ ಆರೋಪಿತರ ಮೇಲೆ ಶಿಸ್ತು ಕ್ರಮ ಕೈಗೊಳ್ಳುವಂತೆ ಪೊಲೀಸ್ ಉಪನಿರೀಕ್ಷಕರಿಗೆ ಸೂಕ್ತ ನಿರ್ದೇಶನ ನೀಡಲು ಜಿಲ್ಲಾಧಿಕಾರಿಗಳಿಗೆ ಪತ್ರ

Suddi Udaya

ಕುವೆಟ್ಟು ಗ್ರಾ.ಪಂ. ನಲ್ಲಿ ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಕೊಕ್ಕಡ ಶ್ರೀ ಕ್ಷೇ. ಧ.ಗ್ರಾ. ಯೋಜನೆಯ ಉಪ್ಪಾರಪಳಿಕೆ ಕಾರ್ಯಕ್ಷೇತ್ರದಲ್ಲಿ ವಿಶ್ವಜ್ಯೋತಿ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ

Suddi Udaya

ನಿಡ್ಲೆ : ಸ. ಪ್ರೌ. ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ರಕ್ಷಿತ್ ಶಿವರಾಂರವರ ಕಾರ್ಯವೈಖರಿ ಮೆಚ್ಚಿ ಕಾಂಗ್ರೆಸ್ ಸೇರ್ಪಡೆಗೊಂಡ ಅಳದಂಗಡಿಯ ಯುವಸಮೂಹ

Suddi Udaya
error: Content is protected !!