April 2, 2025
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ ಸಹಕಾರದಲ್ಲಿ ಜೂನ್ 1ರಂದು ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ಬಯಲು, ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ ಜರುಗಿತು.

ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎ. ನಾರಾಯಣ ಮೂರ್ತಿ (IಈS ಖಣಜ.) ಕಾರ್ಯಕ್ರಮ ಉದ್ಘಾಟಿಸಿ ಬಿದಿರು ಕೃಷಿ ಮಾಡುವ ವಿಧಾನ ಮತ್ತು ಬಿದಿರು ಉತ್ಪನ್ನಗಳಿಗೆ ಇರುವ ಜಾಗತಿಕ ಬೇಡಿಕೆ ಬಗ್ಗೆ ಸೇರಿದ ಕೃಷಿಕರಿಗೆ ಮಾಹಿತಿ ನೀಡಿದರು.

ಬ್ಯಾಂಬೊ ಸೊಸೈಟಿಯ ಅಧ್ಯಕ್ಷ ಪುನತಿ ಶ್ರೀಧರ್ (IಈS ಖಣಜ.) ಬಿದಿರು ಕೃಷಿಯ ಅವಶ್ಯಕತೆಗಳು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಮಾದರಿ ಬಿದಿರು ಕೃಷಿ ಪ್ರದೇಶವನ್ನು ಮಾಡುವ ಉದ್ದೇಶ ಬ್ಯಾಂಬೊ ಸೊಸೈಟಿಗಿದ್ದು, ಆಸಕ್ತ ಕೃಷಿಕರಿಗೆ ಉಚಿತ ಬಿದಿರು ಸಸಿಗಳ ಜೊತೆಗೆ ಪ್ರೋತ್ಸಾಹವನ್ನು ರಬ್ಬರು ಸೊಸೈಟಿ ಮೂಲಕ ನೀಡುವುದಾಗಿ ತಿಳಿಸಿದರು.

ಬಿದಿರು ಕೃಷಿಯಲ್ಲಿ ತೊಡಗಿಕೊಂಡಿರುವಂತಹ ನೆರಿಯದ ರಾಧಾಕೃಷ್ಣ ಹೆಬ್ಬಾರ್ ಇವರು ಕೃಷಿಯನ್ನು ಮಾಡುವ ಸಂದರ್ಭದಲ್ಲಿ ಇರುವ ಸವಾಲುಗಳು ಹಾಗೂ ಕೃಷಿಯ ವಿಧಾನಗಳನ್ನು ತಮ್ಮ ಬಿದಿರು ತೋಟದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅಧೀಕ್ಷಕ ಶ್ರೀಧರ್ ಮಾತನಾಡಿ ಬಿದಿರು ಕೃಷಿಗೆ ಇಲಾಖೆಯಿಂದ ಸಿಗಬಹುದಾದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ರಬ್ಬರ್ ಸೊಸೈಟಿ ಅಧ್ಯಕ್ಷರಾದ ಶ್ರೀ ಶ್ರೀಧರ ಜಿ ಭಿಡೆ ಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ. ಅನಂತ ಭಟ್ ವಂದಿಸಿದರು.

Related posts

ಇಂದಿನಿಂದ ಧರ್ಮಸ್ಥಳ- ಪಾಂಗಳ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya

ಡಿ.30: ರೂ.1.62 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ಪಡಂಗಡಿ ಪ್ರಾ.ಕೃ.ಪ.ಸ. ಸಂಘದ “ಸಮೃದ್ಧಿ” ಸಭಾಭವನ ಹಾಗೂ ಗೋದಾಮು ಕಟ್ಟಡ ಲೋಕಾರ್ಪಣೆ

Suddi Udaya

ಶ್ರೀ ರಾಮ ಗೆಳೆಯರ ಬಳಗ ನೇರೋಳ್ ಪಲ್ಕೆ ಇದರ ವತಿಯಿಂದ ಶ್ರೀ ರಾಮೋತ್ಸವ

Suddi Udaya

ಪದ್ಮುಂಜ ಸರಕಾರಿ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಅವಕಾಶ ವಂಚನೆಯ ಆರೋಪ : ಶಾಲೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಭೇಟಿ

Suddi Udaya

ವಿಧಾನ ಸಭಾ ಚುನಾವಣೆ:241 ಬೂತುಗಳ ಸೆಕ್ಟರ್ ಅಧಿಕಾರಿಗಳು ಹಾಗೂ ಬಿ.ಎಲ್.ಓ.ಗಳ ಸಭೆ

Suddi Udaya

ನಾವೂರು 26ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!