ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ ಸಹಕಾರದಲ್ಲಿ ಜೂನ್ 1ರಂದು ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ಬಯಲು, ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ ಜರುಗಿತು.

ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎ. ನಾರಾಯಣ ಮೂರ್ತಿ (IಈS ಖಣಜ.) ಕಾರ್ಯಕ್ರಮ ಉದ್ಘಾಟಿಸಿ ಬಿದಿರು ಕೃಷಿ ಮಾಡುವ ವಿಧಾನ ಮತ್ತು ಬಿದಿರು ಉತ್ಪನ್ನಗಳಿಗೆ ಇರುವ ಜಾಗತಿಕ ಬೇಡಿಕೆ ಬಗ್ಗೆ ಸೇರಿದ ಕೃಷಿಕರಿಗೆ ಮಾಹಿತಿ ನೀಡಿದರು.

ಬ್ಯಾಂಬೊ ಸೊಸೈಟಿಯ ಅಧ್ಯಕ್ಷ ಪುನತಿ ಶ್ರೀಧರ್ (IಈS ಖಣಜ.) ಬಿದಿರು ಕೃಷಿಯ ಅವಶ್ಯಕತೆಗಳು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಮಾದರಿ ಬಿದಿರು ಕೃಷಿ ಪ್ರದೇಶವನ್ನು ಮಾಡುವ ಉದ್ದೇಶ ಬ್ಯಾಂಬೊ ಸೊಸೈಟಿಗಿದ್ದು, ಆಸಕ್ತ ಕೃಷಿಕರಿಗೆ ಉಚಿತ ಬಿದಿರು ಸಸಿಗಳ ಜೊತೆಗೆ ಪ್ರೋತ್ಸಾಹವನ್ನು ರಬ್ಬರು ಸೊಸೈಟಿ ಮೂಲಕ ನೀಡುವುದಾಗಿ ತಿಳಿಸಿದರು.

ಬಿದಿರು ಕೃಷಿಯಲ್ಲಿ ತೊಡಗಿಕೊಂಡಿರುವಂತಹ ನೆರಿಯದ ರಾಧಾಕೃಷ್ಣ ಹೆಬ್ಬಾರ್ ಇವರು ಕೃಷಿಯನ್ನು ಮಾಡುವ ಸಂದರ್ಭದಲ್ಲಿ ಇರುವ ಸವಾಲುಗಳು ಹಾಗೂ ಕೃಷಿಯ ವಿಧಾನಗಳನ್ನು ತಮ್ಮ ಬಿದಿರು ತೋಟದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅಧೀಕ್ಷಕ ಶ್ರೀಧರ್ ಮಾತನಾಡಿ ಬಿದಿರು ಕೃಷಿಗೆ ಇಲಾಖೆಯಿಂದ ಸಿಗಬಹುದಾದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ರಬ್ಬರ್ ಸೊಸೈಟಿ ಅಧ್ಯಕ್ಷರಾದ ಶ್ರೀ ಶ್ರೀಧರ ಜಿ ಭಿಡೆ ಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ. ಅನಂತ ಭಟ್ ವಂದಿಸಿದರು.

Related posts

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಕಳಿಯ ಮತ್ತು ಬೆಳ್ತಂಗಡಿಮೆಸ್ಕಾಂ ಸಂಪರ್ಕಕ್ಕೆ ರಸ್ತೆಗೆ ಶಿಲಾನ್ಯಾಸ

Suddi Udaya

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಬಡಕೋಡಿ ಸ. ಹಿ. ಪ್ರಾ. ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya
error: Content is protected !!