July 23, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ ಸಹಕಾರದಲ್ಲಿ ಜೂನ್ 1ರಂದು ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ಬಯಲು, ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ ಜರುಗಿತು.

ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎ. ನಾರಾಯಣ ಮೂರ್ತಿ (IಈS ಖಣಜ.) ಕಾರ್ಯಕ್ರಮ ಉದ್ಘಾಟಿಸಿ ಬಿದಿರು ಕೃಷಿ ಮಾಡುವ ವಿಧಾನ ಮತ್ತು ಬಿದಿರು ಉತ್ಪನ್ನಗಳಿಗೆ ಇರುವ ಜಾಗತಿಕ ಬೇಡಿಕೆ ಬಗ್ಗೆ ಸೇರಿದ ಕೃಷಿಕರಿಗೆ ಮಾಹಿತಿ ನೀಡಿದರು.

ಬ್ಯಾಂಬೊ ಸೊಸೈಟಿಯ ಅಧ್ಯಕ್ಷ ಪುನತಿ ಶ್ರೀಧರ್ (IಈS ಖಣಜ.) ಬಿದಿರು ಕೃಷಿಯ ಅವಶ್ಯಕತೆಗಳು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಮಾದರಿ ಬಿದಿರು ಕೃಷಿ ಪ್ರದೇಶವನ್ನು ಮಾಡುವ ಉದ್ದೇಶ ಬ್ಯಾಂಬೊ ಸೊಸೈಟಿಗಿದ್ದು, ಆಸಕ್ತ ಕೃಷಿಕರಿಗೆ ಉಚಿತ ಬಿದಿರು ಸಸಿಗಳ ಜೊತೆಗೆ ಪ್ರೋತ್ಸಾಹವನ್ನು ರಬ್ಬರು ಸೊಸೈಟಿ ಮೂಲಕ ನೀಡುವುದಾಗಿ ತಿಳಿಸಿದರು.

ಬಿದಿರು ಕೃಷಿಯಲ್ಲಿ ತೊಡಗಿಕೊಂಡಿರುವಂತಹ ನೆರಿಯದ ರಾಧಾಕೃಷ್ಣ ಹೆಬ್ಬಾರ್ ಇವರು ಕೃಷಿಯನ್ನು ಮಾಡುವ ಸಂದರ್ಭದಲ್ಲಿ ಇರುವ ಸವಾಲುಗಳು ಹಾಗೂ ಕೃಷಿಯ ವಿಧಾನಗಳನ್ನು ತಮ್ಮ ಬಿದಿರು ತೋಟದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅಧೀಕ್ಷಕ ಶ್ರೀಧರ್ ಮಾತನಾಡಿ ಬಿದಿರು ಕೃಷಿಗೆ ಇಲಾಖೆಯಿಂದ ಸಿಗಬಹುದಾದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ರಬ್ಬರ್ ಸೊಸೈಟಿ ಅಧ್ಯಕ್ಷರಾದ ಶ್ರೀ ಶ್ರೀಧರ ಜಿ ಭಿಡೆ ಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ. ಅನಂತ ಭಟ್ ವಂದಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಛದ್ಮವೇಶ ಸ್ಪರ್ಧೆ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ  ಕಬಡ್ಡಿಯಲ್ಲಿ ವಿಶ್ವಕಪ್ ಗೆದ್ದ ಧನಲಕ್ಷ್ಮೀ ಪೂಜಾರಿ ಭೇಟಿ

Suddi Udaya

ಬೆಳ್ತಂಗಡಿಯಲ್ಲಿ “ಶ್ರೀ ಶಾರದಾ ಒಪ್ಟಿಕಲ್ಸ್” ದೃಷ್ಟಿ ಕನ್ನಡಕಗಳ ಮಳಿಗೆ ಶುಭಾರಂಭ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀಮತಿ ಪುಷ್ಪ ಮತ್ತು ಪುರುಷೋತ್ತಮ ಆಚಾರ್ಯ ಮಾಲಕತ್ವದ ಶ್ರೀ ದುರ್ಗಾ ಎಲೆಕ್ಟ್ರಾನಿಕ್ಸ್-ಫರ್ನಿಚರ್ಸ್ ಪ್ರಾರಂಭೋತ್ಸವ, ಅದೃಷ್ಟ ಯೋಜನೆ ಪ್ರಾರಂಭ

Suddi Udaya

ಎಸ್‌ವೈಎಸ್ ಗುರುವಾಯನಕೆರೆ ಶಾಖೆಯ ವತಿಯಿಂದ 150 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!