25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ

ಮುಂಡಾಜೆ: ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ ಮುಂಡಾಜೆ ಹಾಗೂ ಊರ ದಾನಿಗಳ ಸಹಕಾರದಲ್ಲಿ ಮುಂಡಾಜೆಯ ವೈಸಿ ಭವನದಲ್ಲಿ ಗ್ರಾಮದ ಆಯ್ದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಶೈಕ್ಷಣಿಕ ನಿಧಿ ವಿತರಣೆ ಕಾರ್ಯಕ್ರಮ ಜರಗಿತು.

ಜಿಲ್ಲಾ ಔಷಧ ವ್ಯಾಪಾರಸ್ಥರ ಸಂಘದ ಪೂರ್ವಾಧ್ಯಕ್ಷ ಸುಜಿತ್ ಎಂ.ಭಿಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ “ನಮ್ಮನ್ನು ಗುರುತಿಸಿದವರನ್ನು ಸದಾ ಸ್ಮರಣೆಯಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಅವರಿಗೆ ನೆರವಾಗುವ ಸಂಕಲ್ಪ ಮಾಡಬೇಕು. ಸಮಾಜವನ್ನು ಕಟ್ಟುವ ಕೆಲಸಕ್ಕೆ ವಿದ್ಯಾರ್ಥಿ ಸಮೂಹ ಮುಂದಾಗ ಬೇಕಿದ್ದು ಸಿಗುವ ಅವಕಾಶಗಳನ್ನು ಬಳಸಿಕೊಂಡು ಕಲಿಕೆಯಲ್ಲಿ ಛಲವನ್ನು ಹೊಂದಿ, ಸಂಸ್ಕಾರ ಮತ್ತು ಶಿಸ್ತಿನ ಜೀವನ ನಡೆಸಬೇಕು. ಪ್ರಯತ್ನಕ್ಕೆ ತಕ್ಕ ಯಶಸ್ಸು ಸಿಗುವುದು ನಿಶ್ಚಿತ” ಎಂದರು.

ಉದ್ಯಮಿ ಅರೆಕಲ್ ರಾಮಚಂದ್ರ ಭಟ್ ಮಾತನಾಡಿ “ಪ್ರತಿಭೆಗಳನ್ನು ಗುರುತಿಸುವುದರಿಂದ ಎಲೆಮರೆಯ ಕಾಯಿಗಳು ಹೊರ ಬರುತ್ತವೆ ಹಾಗೂ ಅವರ ಭವಿಷ್ಯ ಗಟ್ಟಿಯಾಗಲು ಇದು ನಾಂದಿಯಾಗುತ್ತದೆ. ಗುರುತಿಸುವುದರಿಂದ ನಮ್ಮ ಜವಾಬ್ದಾರಿ ಹೆಚ್ಚುವುದಲ್ಲದೆ ಸಮಾಜಕ್ಕೆ ಸಹಕಾರ ನೀಡಲು ಪ್ರೇರಣೆಯಾಗುತ್ತದೆ” ಎಂದರು.

ಮುಂಡಾಜೆ ಗ್ರಾಪಂ ಅಧ್ಯಕ್ಷ ಗಣೇಶ ಬಂಗೇರ, ಮಾಜಿ ಸದಸ್ಯೆ ಅಶ್ವಿನಿ ಎ. ಹೆಬ್ಬಾರ್, ಅನಂತ ಫಡ್ಕೆ ಮೆಮೋರಿಯಲ್ ಟ್ರಸ್ಟ್ ಸಂಚಾಲಕ ಪ್ರಹ್ಲಾದ ಫಡ್ಕೆ,ವೈದ್ಯ ಡಾ. ಶಿವಾನಂದ ಸ್ವಾಮಿ, ಉಪನ್ಯಾಸಕ ಸಚಿನ್ ಹೆಬ್ಬಾರ್, ಉದ್ಯಮಿ ಶಮಂತ ಕುಮಾರ್ ಜೈನ್ ಮತ್ತಿತರರು ಉಪಸ್ಥಿತರಿದ್ದರು.

ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ಮತ್ತು ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ಕ್ರೀಡಾ ಸಂಘದ ಅಧ್ಯಕ್ಷ ಶೀನಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು.ಸಂಚಾಲಕ ನಾಮದೇವ ರಾವ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ಶಶಿಧರ ಠೋಸರ್ ಸ್ವಾಗತಿಸಿದರು. ಸದಸ್ಯೆ ಜತೀಕ್ಷಾ ಕಾರ್ಯಕ್ರಮ ನಿರೂಪಿಸಿದರು. ಖಜಾಂಚಿ ಸಾಂತಪ್ಪ ವಂದಿಸಿದರು.

Related posts

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಮಂಜೊಟ್ಟಿ ಹೋಲಿಕ್ರಾಸ್ ಚರ್ಚ್ ನಲ್ಲಿ ಪವಿತ್ರ ಶಿಲುಬೆಯ ಅವಶೇಷದ ಭವ್ಯ ಮೆರವಣಿಗೆ, ಪ್ರತಿಷ್ಠಾಪನ ಸಂಭ್ರಮ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ನಿಟ್ಟಡೆ ಕುಂಭಶ್ರೀ ವಿದ್ಯಾಸಂಸ್ಥೆ ಚಾಂಪಿಯನ್

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ” ಸಲ್ಯೂಟ್ ದಿ ಸೈಲೆಂಟ್ ಸ್ಟಾರ್ ” ಕಾರ್ಯಕ್ರಮ

Suddi Udaya
error: Content is protected !!