24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮಕ್ಕೆ ಹೊಂಡ ರಚನೆ, ಶಾಲಾ ಕೈತೋಟ ರಚನೆ, ಮಡಂತ್ಯಾರು ಹಾಗೂ ಮಚ್ಚಿನ, ಪಾಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ಸುಭಾಷ್, ಸೇವಾ ಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಡಂತ್ಯಾರು ಘಟಕದ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ಯೋಗೀಶ್ ಕೋಡ್ಲಕ್ಕೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಸತೀಶ್ ಆಚಾರ್ಯ ಮತ್ತು ಮಚ್ಚಿನ -ಪಾಲಡ್ಕ ಘಟಕದ ಪ್ರಭಾಕರ ಮುದಲಡ್ಕ, ಹೊನ್ನಪ್ಪ ಮೂಲ್ಯ, ಜಯ ಪೂಜಾರಿ, ಅವಿನಾಶ್ ಶ್ರಮದಾನದಲ್ಲಿ ಸಹಕರಿಸಿದರು.

Related posts

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಹೊಟ್ಟೆನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಯುವತಿ ಮೃತ್ಯು

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಕಾಯರ್ತಡ್ಕ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿ ಆ್ಯಡ್ಲಿನ್ ಎಲಿಜಬೆತ್ ಜೆರಿನ್ ಕುಮಿಟೆ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ನಡ ಅಂಗನವಾಡಿ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸಿದ ಶ್ರೀಮತಿ ರಾಜೀವಿರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya
error: Content is protected !!