28 C
ಪುತ್ತೂರು, ಬೆಳ್ತಂಗಡಿ
April 5, 2025
Uncategorized

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಬಂಗಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಬಂಗಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಜನಜಾಗೃತಿ ಅಧ್ಯಕ್ಷ ಖಾಸೀಂ ಮಲ್ಲಿಗೆಮನೆ ವಹಿಸಿದ್ದರು.

ಜನಜಾಗೃತಿ ವೇದಿಕೆಯ ಶಿಭಿರಾಧಿಕಾರಿ ದಿವಾಕರ ಪೂಜಾರಿ ಮಾತನಾಡಿ ತಂಬಾಕು ಸೇವನೆಯಿಂದ ಉಂಟಾಗುವ ಅಡ್ಡ ಪರಿಣಾಮಗಳು, ಚಿಕ್ಕ ಮಕ್ಕಳಿಂದಲೇ ಈ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮನೆಯವರು ಮಾಡಬೇಕು, ಹೀಗಿದ್ದರೆ ಮಾತ್ರ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲೂಕು ಜನಜಾಗೃತಿ ಪದಾಧಿಕಾರಿ ಶಶಿಧರ ಗೌಡ ಮನ್ನಡ್ಕ, ಬಂಗಾಡಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ, ನೂತನ ಅಧ್ಯಕ್ಷ ವಿಶ್ವನಾಥ ಗೌಡ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ನಾವೂರು ಗ್ರಾಮ ಸಮಿತಿ ಅಧ್ಯಕ್ಷ ಗೋವಿಂದ ಮೂಲ್ಯ, ವಲಯ ಮೇಲ್ವಿಚಾರಕಿ ಉಷಾ, ಸೇವಾಪ್ರತಿನಿಧಿ ಶೈಲಾ, ನಾವೂರು ಸೇವಾಪ್ರತಿನಿಧಿ ಸುನೀತ, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಪ್ರೋ. ಕೆ.ಯಸ್ ಭಗವಾನ್ ಅವರ ಹೇಳಿಕೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಖಂಡನೆ

Suddi Udaya

ಮಿತ್ತಬಾಗಿಲು ಚೌಕಿಬೆಟ್ಟು ನಿವಾಸಿ ತನಿಯಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿಗೆ ಮ್ಯಾನೇಜ್ಮೆಂಟ್ ಪೇಸ್ಟ್ ನಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ನಿಂದ ವಿವಿಧ ರೀತಿಯಲ್ಲಿ ಸಹಕರಿಸಿದ ಮಹನೀಯರಿಗೆ ಸನ್ಮಾನ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ