25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇ. ಧ.ಗ್ರಾ. ಯೋಜನೆ ವತಿಯಿಂದ ಬಂಗಾಡಿ ಹಿ.ಪ್ರಾ. ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮ

ಬಂಗಾಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ಬಂಗಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಾಲೂಕಿನ ಜನಜಾಗೃತಿ ಅಧ್ಯಕ್ಷ ಖಾಸೀಂ ಮಲ್ಲಿಗೆಮನೆ ವಹಿಸಿದ್ದರು.

ಜನಜಾಗೃತಿ ವೇದಿಕೆಯ ಶಿಭಿರಾಧಿಕಾರಿ ದಿವಾಕರ ಪೂಜಾರಿ ಮಾತನಾಡಿ ತಂಬಾಕು ಸೇವನೆಯಿಂದ ಉಂಟಾಗುವ ಅಡ್ಡ ಪರಿಣಾಮಗಳು, ಚಿಕ್ಕ ಮಕ್ಕಳಿಂದಲೇ ಈ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನ ಮನೆಯವರು ಮಾಡಬೇಕು, ಹೀಗಿದ್ದರೆ ಮಾತ್ರ ದುಶ್ಚಟ ಮುಕ್ತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಸುರೇಂದ್ರ, ತಾಲೂಕು ಜನಜಾಗೃತಿ ಪದಾಧಿಕಾರಿ ಶಶಿಧರ ಗೌಡ ಮನ್ನಡ್ಕ, ಬಂಗಾಡಿ ಒಕ್ಕೂಟದ ನಿಕಟ ಪೂರ್ವ ಅಧ್ಯಕ್ಷ ಚಂದ್ರಶೇಖರ, ನೂತನ ಅಧ್ಯಕ್ಷ ವಿಶ್ವನಾಥ ಗೌಡ, ಇಂದಬೆಟ್ಟು ಗ್ರಾಮ ಸಮಿತಿ ಅಧ್ಯಕ್ಷ ವೀರಪ್ಪ ಮೊಯ್ಲಿ, ನಾವೂರು ಗ್ರಾಮ ಸಮಿತಿ ಅಧ್ಯಕ್ಷ ಗೋವಿಂದ ಮೂಲ್ಯ, ವಲಯ ಮೇಲ್ವಿಚಾರಕಿ ಉಷಾ, ಸೇವಾಪ್ರತಿನಿಧಿ ಶೈಲಾ, ನಾವೂರು ಸೇವಾಪ್ರತಿನಿಧಿ ಸುನೀತ, ಸಂಘದ ಸದಸ್ಯರು ಭಾಗವಹಿಸಿದ್ದರು.

Related posts

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಬಳಂಜ ಗ್ರಾ.ಪಂ. ನ ನೂತನ ಅಧ್ಯಕ್ಷರಾಗಿ ಶೋಭಾ ಕುಲಾಲ್, ಉಪಾಧ್ಯಕ್ಷರಾಗಿ ಯಶೋಧರ ಶೆಟ್ಟಿ ಅವಿರೋಧವಾಗಿ ಆಯ್ಕೆ

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

.ಸುಬ್ರಹ್ಮಣ್ಯ ಭಟ್ಟರು ಬರೆದ ಪೌರಾಣಿಕ ಕಾದಂಬರಿ “ಸುಜ್ಞಾನಿ ಸಹದೇವ” ವನ್ನು  ಇಂದು ಧರ್ಮಸ್ಥಳದ ಧರ್ಮಾಧಿಕಾರಿ ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆ

Suddi Udaya

ಉಜಿರೆ ವರ್ತಕರ ಸಂಘದ ನೇತೃತ್ವದಲ್ಲಿ ಉಜಿರೆ ಬ್ರಹ್ಮಕಲಶೋತ್ಸವ ವಾಹನ ಜಾಥಕ್ಕೆ ಚಾಲನೆ – ನೂರಾರು ಸಂಖ್ಯೆಯಲ್ಲಿ ವಾಹನದಲ್ಲಿ ಪಾಲ್ಗೊಂಡ ಭಕ್ತರು, ಪುಂಜಾಲಕಟ್ಟೆ,ಧರ್ಮಸ್ಥಳ,ಉಜಿರೆ ವಾಹನ ಜಾಥ ಮೂಲಕ ಸೇವೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಕಡಬಾಗಿಲು ಸೇತುವೆ ನಿರ್ಮಾಣಕ್ಕೆ ಮತ್ತೆ ವಿಘ್ನು : ಸದ್ಯಕಿಲ್ಲ ಕಾಮಗಾರಿ ಭಾಗ್ಯ…

Suddi Udaya
error: Content is protected !!