April 2, 2025
Uncategorized

ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಾಗಿ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್‌ರಿಗೆ ಡಾಕ್ಟರೇಟ್ ಪದವಿ

ಬೆಳ್ತಂಗಡಿ: ಸಾಮಾಜ ಸೇವೆ ಮತ್ತು ಆಧ್ಯಾತ್ಮಿಕ ಸೇವೆಯಲ್ಲಿ ನಿರತರಾಗಿರುವ ಲಯನ್ಸ್ ಡಿಸ್ಟಿಕ್ ಕೋರ್ಡಿನೇಟರ್ ಆಗಿ ಕಾರ್ಯನಿರ್ವಹಿಸುತ್ತಿರುವ ಬೆಳ್ತಂಗಡಿಯ ಲ| ಬಿ.ಕೆ ವಿಶ್ವನಾಥ ಆರ್. ನಾಯಕ್ ಅವರಿಗೆ ಚೆನ್ನೈಯ ಜೀವ ಥಿಯೋಲಾಜಿಕಲ್ ಓಪನ್ ಯೂನಿರ್ವಸಿಟಿ ಡಾಕ್ಟೇರೆಟ್ ಪದವಿ ನೀಡಿ ಗೌರವಿಸಿದೆ.

ಮೇ 25ರಂದು ಚೆನ್ನೈಯ ಅನಿತಾ ಕಾನ್ಪೇರೆನ್ಸ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಯೂನಿರ್ವಸಿಟಿಯ ಚಾನ್ಸಲರ್ ಝಾನ್ಸೀರಾಣಿ ಅವರು ವಿಶ್ವನಾಥ ಆರ್. ನಾಯಕ್ ಅವರಿಗೆ ಪದವಿ ಪ್ರದಾನ ಮಾಡಿದರು. ಡಾ. ವಿಶ್ವನಾಥ ಆರ್.ನಾಯಕ್ ಅವರು ಮಾಡಿರುವ ಸಮಾಜ ಸೇವೆಗಾಗಿ 2022ರಲ್ಲಿ ಅಂತರ್‌ರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯಿಂದ ಪುರಸ್ಕೃತಗೊಂಡಿದ್ದರು.

ಲಯನ್ಸ್ ಕ್ಲಬ್ ಬೆಳ್ತಂಗಡಿಯ ಚಾರ್ಟರ್ ಮೆಂಬರ್ ಆಗಿರುವ ಎಂ.ಜೆ.ಎಫ್ ಡಾ. ವಿಶ್ವನಾಥ ಆರ್. ನಾಯಕ್ ಅವರು ಬೆಳ್ತಂಗಡಿ ಲಯನ್ಸ್ ಕ್ಲಬ್ ಕಾರ್ಯದರ್ಶಿಯಾಗಿ, ಅಧ್ಯಕ್ಷರಾಗಿ, ರಿಜನಲ್ ಚಾಯರ್‌ಮೆನ್ ಆಗಿ, ಜೋನ್ ಚಾಯರ್‌ಮೆನ್ ಆಗಿ ಸೇವೆ ಸಲ್ಲಿಸಿದ್ದು, ಪ್ರಸ್ತತ ಡಿಸ್ಟಿಕ್ ಕ್ಯಾಬಿನೆಟ್‌ನಲ್ಲಿ ಕೋ-ಅರ್ಡಿನೇಟರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇವರು ಬೆಳ್ತಂಗಡಿಯಲ್ಲಿ ವಿನಾಯಕ ವುಡ್ ಇಂಡಸ್ಟ್ರೀಸ್‌ನ್ನು ಸ್ಥಾಪಿಸಿ ಹಲವು ವರ್ಷ ನಡೆಸಿಕೊಂಡು ಬಂದಿದ್ದರು. ಶ್ರೀರಾಮ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷರಾಗಿ, ರಾಮಕ್ಷತ್ರೀಯ ಸೇವಾ ಸಂಘದ ಸ್ಥಾಪಕ ಅಧ್ಯಕ್ಷರಾಗಿ, ಅವಿಭಜಿತ ದ.ಕ ಜಿಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಮಾಜಿ ಸದಸ್ಯರಾಗಿ, ಆಶಾ ಯುವಕ ಸಂಘದ ಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಈಶ್ವರಿ ವಿಶ್ವವಿದ್ಯಾನಿಲಕ್ಕೆ ಕಟ್ಟಡ ಕಟ್ಟಿಕೊಡುವಲ್ಲಿಯೂ ಪೂರ್ಣ ಸಹಕಾರ ನೀಡಿದ್ದಾರೆ.

Related posts

ಮಾಲಾಡಿ ಗ್ರಾ.ಪಂ ಅಧ್ಯಕ್ಷ ಪುನೀತ್ ಕುಮಾರ್ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಉಂಟಾಗಿರುವ ದೊಡ್ಡ ಗಾತ್ರದ ಹೊಂಡಗಳನ್ನು ಮುಚ್ಚುವ ಕೆಲಸ, ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಮೊಗ್ರು ಗ್ರಾಮದ ಅಲೆಕ್ಕಿ ಮುಗೇರಡ್ಕ ದ ಶ್ರೀ ರಾಮ ಶಿಶುಮಂದಿರದಲಿ ಅದ್ದೂರಿಯಾಗಿ ಶಾರದಾ ಪೂಜೆ ಮತ್ತು ಮಕ್ಕಳ ಅಕ್ಷರಾಭ್ಯಾಸ ಮತ್ತು ವಾಹನ ಪೂಜೆ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಬಗ್ಗೆ ಅಶ್ಲೀಲ ಪದ ಬಳಕೆ ಆರೋಪ: ಮಹಿಳಾ ಕಾಂಗ್ರೆಸ್‌ನಿಂದ ದೂರು

Suddi Udaya

ಇಬ್ಬರು ಆರೋಪಿಗಳಿಗೆ ನ್ಯಾಯಾಂಗ ಬಂಧನ.

Suddi Udaya

ಕೊಕ್ಕಡ ಪೇಟೆಯಲ್ಲಿ ಸಿ.ಆರ್.ಪಿ.ಎಫ್ ಹಾಗೂ ಧರ್ಮಸ್ಥಳ ಪೊಲೀಸರ ಪಥ ಸಂಚಲನ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya
error: Content is protected !!