September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

ಉಜಿರೆ: ಜಾತಿ ನಿಂದನೆ ಮಾಡಿ ಯುವಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಜಿರೆ ಗ್ರಾಮದ ಮಾಚಾರು ಎಂಬಲ್ಲಿ ಜೂ.2ರಂದು ನಡೆದಿದೆ. ಹಲ್ಲೆಗೊಳಗಾದ ಯುವಕ ಅಶ್ವಥ್ (೨೧ವ) ಆಸ್ಪತ್ರೆಗೆ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅಶ್ವಥ್ ರವರು ಜೂ.2ರಂದು ಉಜಿರೆ ಗ್ರಾಮದ ಮೇಲಿನ ಮಚಾರು ಎಂಬಲ್ಲಿರುವಾಗ ಕರುಣಾಕರ ಗೌಡ, ನಿತಿನ್ ಮತ್ತು ಹಾಗೂ ಇನ್ನೊಬ್ಬ ವ್ಯಕ್ತಿ ಬಂದಿದ್ದಾರೆ. ಅವರಲ್ಲಿ ಕರುಣಾಕರ ಗೌಡ ಎಂಬವರು ಅಶ್ವಥ್ ಅವರಿಗೆ ಜಾತಿ ನಿಂದನೆ ಮಾಡಿದ್ದಾರೆ. ಅಲ್ಲದೇ ನಿತಿನ್ ಎಂಬವರೊಂದಿಗೆ ಸೇರಿ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ, ಅಶ್ವತ್ ರವರು ನೀಡಿದ ದೂರಿನ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಕ್ರ ನಂ 64/2024, ಕಲಂ: 341,323,324,ಜೊತೆಗೆ 34 ಬಾ ದಂ ಸಂ ಮತ್ತು ಕಲಂ 3(1)(S) SC/ST ACT 2015ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

Related posts

ಶಾಸಕ ಹರೀಶ್ ಪೂಂಜರಿಗೆ ಕರ್ನಾಟಕ ಟಿವಿ “ಲೀಡರ್ ಅವಾರ್ಡ್ಸ್”

Suddi Udaya

ವಾಲಿಬಾಲ್ ಪಂದ್ಯಾಟ: ವಾಣಿ ಆಂ.ಮಾ. ಪ್ರೌಢ ಶಾಲೆ ಹುಡುಗರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ 12 ಕ್ಷೇತ್ರಗಳಲ್ಲೂ ಜಯಭೇರಿ, 1 ಕ್ಷೇತ್ರಕ್ಕೆ ಅವಿರೋಧ ಆಯ್ಕೆ

Suddi Udaya

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya

ಅಹಿಶ್ಛತ್ರ ಗುರುಕುಲದಲ್ಲಿ ಸಂಸ್ಕಾರ ಶಿಬಿರದ ಸಮಾರೋಪ

Suddi Udaya
error: Content is protected !!