July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಉಜಿರೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಒಕ್ಕೂಟ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್, ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ ಮಾಚಾರು ಇದರ ಆಶ್ರಯದಲ್ಲಿ ಮತ್ತು ಊರವರ ಸಹಕಾರದೊಂದಿಗೆ ಶ್ರೀ ಸತ್ಯ ನಾರಾಯಣ ಪೂಜೆ ಕಾರ್ಯಕ್ರಮ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲಾ ಸದಸ್ಯರ ಊರವರ ಸಹಕಾರದೊಂದಿಗೆ ನಡೆಸಲಾಯಿತು.

ಶ್ರೀ ಲಕ್ಷೀ ಜನಾರ್ಧನ ಕುಣಿತ ಭಜನಾ ಮಂಡಳಿಯ ಮಕ್ಕಳಿಂದ ಕುಣಿತ ಭಜನೆಯನ್ನು ಸಮಿತಿ ಅಧ್ಯಕ್ಷರು ಗಿರಿರಾಜ ಬಾರಿತ್ತಾಯರವರು ಮತ್ತು ಒಕ್ಕೂಟದ ಪದಾಧಿಕಾರಿಗಳು ದೀಪ ಪ್ರಜ್ವಲನೆ ಮಾಡುವುದರೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು.

ಈ ಸಂದರ್ಭದಲ್ಲಿ ಇಳಂತಿಲ ಪಂಚಾಯತ್‌ನಲ್ಲಿ ಪಿಡಿಒ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾದ ಸಂಜೀವ ನಾಯ್ಕ್ ಮತ್ತು ತೋಟಗಾರಿಕೆ ಇಲಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಲೋಕಯ್ಯ ನಾಯ್ಕ್ ರವರಿಗೆ ವಿಶೇಷವಾಗಿ ಒಕ್ಕೂಟದ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆಡಳಿತ ಮೋಕೆಸ್ತಾ ಶರತ್‌ಕೃಷ್ಣ ಪಡ್ವೆಟ್ನಾಯ, ಪೂಜಾ ಸಮಿತಿ ಅಧ್ಯಕ್ಷ ಗಿರಿರಾಜ ಬಾರಿತ್ತಾಯ, ನಿವೃತ್ತ ಪ್ರಾದೇಶಿಕ ನಿರ್ದೇಶಕ ಸೀತಾರಾಮ ಶೆಟ್ಟಿ, ತಾಲೂಕು ಯೋಜನಾಧಿಕಾರಿ ಸುರೇಂದ್ರ, ವಲಯ ಮೇಲ್ವಿಚಾರಕರು, ಒಕ್ಕೂಟದ ನೂತನ ನಿಕಟ ಪೂರ್ವ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಪತ್ತೆಯಾಗಿದ್ದ ಬೆಳಾಲು ಮಾಯಾ ಅತ್ರಿಜಾಲು ತಮ್ಮಯ್ಯ ಗೌಡರ ಮೃತ‌ದೇಹ ಕೆರೆಯಲ್ಲಿ ಪತ್ತೆ- ಶವ ಮೇಲೆತ್ತಿದ‌ ಶೌಯ೯ ವಿಪತ್ತು ತಂಡ

Suddi Udaya

ಸುಜ್ಞಾನ ನಿಧಿ ಸ್ಕಾಲರ್ ಶಿಪ್ ಮಂಜೂರಾತಿ ಪತ್ರ ವಿತರಣೆ

Suddi Udaya

ಕೃಷಿಕ ಸವಣಾಲು ವಸಂತ ಪೂಜಾರಿ ನಿಧನ

Suddi Udaya

ಮುಗೇರಡ್ಕ ಶಿರಾಡಿ ದೈವದ ಹುಲಿಬಂಡಿಯ ಮತ್ತು ಪಲ್ಲಕ್ಕಿಯ ಪುರಪ್ರವೇಶ: ಪೆರ್ಲ -ಬೈಪಾಡಿಯಿಂದ ಮುಗೇರಡ್ಕದವರೆಗೆ ವಾಹನ ಜಾಥಾ

Suddi Udaya

ಮುಂಡೂರು ಶ್ರೀ ನಾಗಕಲ್ಲುರ್ಟಿ ದೈವಸ್ಥಾನದಲ್ಲಿ 10ನೇ ವರ್ಷದ ಸಂಭ್ರಮದ ಗಣೇಶೋತ್ಸವ

Suddi Udaya

ಉರುವಾಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಹಾಗೂ ವಿವಿಧ ಸಮಿತಿಯ ವತಿಯಿಂದ ಸತ್ಯನಾರಾಯಣ ಪೂಜೆ ಹಾಗೂ ಏಕಾಹ ಭಜನಾ ಮಹೋತ್ಸವ

Suddi Udaya
error: Content is protected !!