25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ತಾಲೂಕು ಭಜನಾ ಪರಿಷತ್ ಕಾರ್ಯದರ್ಶಿಯಿಂದ ಸಮಲೋಚನಾ ಸಭೆ

ಕೊಯ್ಯೂರು: ಶ್ರೀ ಕೃಷ್ಣ ಭಜನಾ ಮಂಡಳಿ (ರಿ) ಆದೂರು ಪೇರಲ್ ಕೊಯ್ಯೂರು ಇಲ್ಲಿಗೆ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ . ಚಂದ್ರಶೇಖರ ಸಾಲ್ಯಾನ್ ಇವರು ಅಧಿಕೃತವಾಗಿ ಭೇಟಿ ನೀಡಿ ಮಂಡಳಿಯ ಪದಾಧಿಕಾರಿಗಳೊಂದಿಗೆ ಹಾಗೂ ಸದಸ್ಯರುಗಳೊಂದಿಗೆ ಇತ್ತೀಚಿನ ದಿನಗಳಲ್ಲಿ ಭಜನೆಯಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಸಮಲೋಚನೆ ನಡೆಸಿ , ನಮಗೆ ಮಾತ್ರವಲ್ಲದೆ ಮಕ್ಕಳಿಗೂ ವಿವಿಧತೆಯ ಭಜನೆಯಲ್ಲಿ ಶ್ರದ್ಧಾ ಭಕ್ತಿಯಿಂದ ಏಕತೆಯನ್ನು ಕಾಣುವಂತಾಗಲು ನಾವೆಲ್ಲರೂ ಪ್ರೇರಣೆಯಾಗೋಣ ಎಂದರು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಅಧ್ಯಕ್ಷರಾದ ವಿಶ್ವನಾಥ ಗೌಡ ಬಚ್ಚಿರೆದಡಿ ಉಪಾಧ್ಯಕ್ಷರಾದ ಶೇಖರ ಗೌಡ ಕೋರಿಯಾರು ಗೌರವ ಅಧ್ಯಕ್ಷರಾದ ಲಿಂಗಪ್ಪಗೌಡ ಬೆರ್ಕೆ ಕಾರ್ಯದರ್ಶಿ ಶ ಮನೋಜ್ ಕುಮಾರ್ ಕಜೆ ಕೋಶಾಧಿಕಾರಿ ಪಿ. ಬಾಲಕೃಷ್ಣ ಸಾಲಿಯಾನ್ ಲೆಕ್ಕಪರಿಶೋಧಕರಾದ ಹೇಮಂತಗೌಡ ಬೊಟ್ಟು ಹಾಗೂ ಮಂಡಳಿಯ ಸದಸ್ಯರುಗಳು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ಲಿಂಗಪ್ಪಗೌಡ ಬೆರ್ಕೆ ಸ್ವಾಗತಿಸಿ ಕೊನೆಯಲ್ಲಿ ವಂದಿಸಿದರು.

Related posts

ಶಿಶಿಲ: ಸಾರ್ವಜನಿಕ ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಪದ್ಮಪ್ಪ ಆಯ್ಕೆ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ: ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya

ಶಿಶಿಲ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಬಗ್ಗೆ ಆರೋಪ, ಅಪಪ್ರಚಾರ ಮಾಡಿದ ಹಿನ್ನೆಲೆ: ಸುದ್ದಿ ಬಿಡುಗಡೆ ಪತ್ರಿಕೆಯ ಇಬ್ಬರ ಸದಸ್ಯತನ ಅಮಾನತು

Suddi Udaya
error: Content is protected !!