24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ

ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಯಲ್ಲಿ ವಾಣಿಜ್ಯ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮವು ನಡೆಯಿತು.

ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಇಂಟಿಗ್ರೇಟೆಡ್ ಪದವಿ ಪೂರ್ವ ಕಾಲೇಜಾಜಿ ಎಕ್ಸೆಲ್ ವಿದ್ಯಾಸಂಸ್ಥೆಯು ಗುರುತಿಸಿಕೊಂಡಿದ್ದು, ವಾಣಿಜ್ಯ ವಿಭಾಗವನ್ನು ಹೋಲಿ ರೆಡಿಮರ್ ಶಾಲೆಯ ಮುಖ್ಯೋಪಾಧ್ಯಾಯ ಫಾದರ್ ಕ್ಲಿಫರ್ಡ್ ಎಸ್. ಪಿಂಟೋ ರವರು ‘ಎಕ್ಸೆಲ್ ಇನ್ ಕಾಮರ್ಸ್, ಎಕ್ಸೆಲ್ ಇನ್ ಲೈಫ್’ ಎಂಬ ಉದ್ಘೋಷದೊಂದಿಗೆ ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಂಚಲನ ಮೂಡಿಸಿದ ಎಕ್ಸೆಲ್ ವಿದ್ಯಾ ಸಂಸ್ಥೆಯು ನೂತನವಾಗಿ ವಾಣಿಜ್ಯ ವಿಭಾಗದಲ್ಲೂ ಹೊಸ ಶಕೆಯನ್ನು ಬರೆಯ ಹೊರಟಿದೆ. ಸಿ.ಎ. ಫೌಂಡೇಶನ್ ಕೋರ್ಸ್ ನಲ್ಲಿ ಮಕ್ಕಳಿಗೆ ರಾಜ್ಯಮಟ್ಟದ ಉತ್ತಮ ರಾಂಕ್ ತಂದು ಕೊಟ್ಟ ಅಧ್ಯಾಪಕರನ್ನು ಹೊoದಿರುವುದು ಗಮನಾರ್ಹವಾಗಿದೆ. ಇಂದಿನ ಕಾಲದಲ್ಲಿ ವಾಣಿಜ್ಯ ವಿಭಾಗದಲ್ಲಿನ ಗಣನೀಯ ಬದಲಾವಣೆಗಳು ಮಕ್ಕಳಿಗೆ ವ್ಯಾಪಕ ಅವಕಾಶಗಳನ್ನು ನೀಡುತ್ತಿದೆ. ಇ-ಕಾಮರ್ಸ್, ಡಿಜಿಟಲೀಕರಣ, ವಾಣಿಜ್ಯ ತೆರಿಗೆ ವಿಭಾಗ, ಹೆಚ್ಚಿದ ವ್ಯಾಪಾರ ವಹಿವಾಟುಗಳಿಂದಲಾಗಿ ಮುಕ್ತ ಉದ್ಯೋಗದ ಅವಕಾಶ ಸಾಧ್ಯವಾಗಿದೆ. ನೆರೆದಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಸಾಧನೆಯ ಹಾದಿಗೆ ಜಾಗತೀಕ ಮಟ್ಟದಲ್ಲಿ ತೆರೆದ ಅವಕಾಶಗಳಿದ್ದು ಅವುಗಳನ್ನು ಸಮರ್ಪಕವಾಗಿ ಬಳಸುವಂತೆ ಮಾರ್ಗದರ್ಶನ ನೀಡಿದರು.

ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರು ಹೊಸದಾಗಿ ದಾಖಲೆಗೊಂಡ ವಾಣಿಜ್ಯ ವಿಭಾಗದ ಮಕ್ಕಳನ್ನು ಉದ್ದೇಶಿಸಿ ಮಾತನಾಡುತ್ತಾ, ಕೇವಲ ವಿಜ್ಞಾನ ವಿಭಾಗದಲ್ಲಿ ಸಾಧನೆಗೈದ ನಮ್ಮ ಸಂಸ್ಥೆಯು ಇನ್ನು ಮುಂದೆ ವಾಣಿಜ್ಯ ವಿಭಾಗದಲ್ಲೂ ಸಾಧನೆಗೆ ಅಣಿಯಾಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಚಾರವಾಗಿದೆ. ಇದರೊಂದಿಗೆ ಎಲ್ಲಾ ಸೌಕರ್ಯವನ್ನು ಹಾಗೂ ವಿದ್ಯಾರ್ಜನೆಗೆ ಬೇಕಾದ ಎಲ್ಲಾ ಸಹಕಾರವನ್ನು ನೀಡುತ್ತಿದ್ದೇವೆ. ಅತ್ಯುತ್ತಮ ಅನುಭವ ಇರುವ ಮತ್ತು ರಾಜ್ಯದಲ್ಲಿ ಸಿ.ಎ., ಸಿ. ಎಸ್. ಕೋರ್ಸ್‌ಗಳಲ್ಲಿ ಅತ್ಯಂತ ಹೆಚ್ಚು ಫಲಿತಾಂಶಕ್ಕೆ ಅಡಿಪಾಯ ಹಾಕುವ ಅಧ್ಯಾಪಕ ವರ್ಗವನ್ನು ಎಕ್ಸೆಲ್ ಸಂಸ್ಥೆ ಹೊಂದಿರುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಕಾರ್ಯದರ್ಶಿಗಳಾದ ಅಭಿರಾಮ್ ಬಿ.ಎಸ್. , ಪ್ರಾಂಶುಪಾಲರಾದ ಡಾ.ನವೀನ್ ಕುಮಾರ್ ಮರಿಕೆ, ಶಾಂತಿರಾಜ್ ಜೈನ್, ಕೀರ್ತಿನಿಧಿ ಜೈನ್, ರಿಚರ್ಡ್ ಜೀವನ್ , ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಸನ್ನ ಭಾಗವಹಿಸಿದ್ದರು.
ವಾಣಿಜ್ಯ ವಿಭಾಗದ ಡೀನ್ ಸಂತೋಷ್ ರವರು ನಿರೂಪಣೆ ಮಾಡಿದರು. ಪ್ರಭಾಕರ್ ರವರು ಸ್ವಾಗತಿಸಿ, ರವಿ ಇವರು ವಂದಿಸಿದರು.

Related posts

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಅ.13-19 : ವಾಣಿ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಾರ್ಷಿಕ ವಿಶೇಷ ಶಿಬಿರ

Suddi Udaya

ಯಕ್ಷಭಾರತಿ ದಶಮಾನೋತ್ಸವ ಸಭಾ ಸಮಾರಂಭ ಮತ್ತು ಭಾರತ ಮಾತಾ ಪೂಜನ : ದಶಮಾನೋತ್ಸವ ಗೌರವ-ಯಕ್ಷಭಾರತಿ ಪ್ರಶಸ್ತಿ-ಸೇವಾ ಗೌರವ-ವಿದ್ಯಾರ್ಥಿ ವೇತನ ವಿತರಣೆ

Suddi Udaya

ಉಜಿರೆ: ಬೈಕ್ ಡಿವೈಡರ್ ಗೆ ಡಿಕ್ಕಿ, ಸವಾರ ಕಾಲೇಜು ವಿದ್ಯಾರ್ಥಿ ಗಂಭೀರ

Suddi Udaya

ಜ.25: ಬೆಳ್ತಂಗಡಿಯಲ್ಲಿ ಕೋಟಕ್ ಲೈಫ್ ಉದ್ಘಾಟನೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜು: ಪೆರಿಂಜೆಯಲ್ಲಿ ಎನ್ನೆಸ್ಸೆಸ್ ಶಿಬಿರ

Suddi Udaya
error: Content is protected !!