22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಭಗವದ್ಗೀತಾ ತರಗತಿ ಪ್ರಾರಂಭ

ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ ಪ್ರಜ್ವಲನೆ ಮಾಡುವ ಮೂಲಕ ಉದ್ಘಾಟಿಸಿ ಚಾಲನೆ ನೀಡಿದರು.

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಹರೀಶ್ ಮೊರ್ತಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ರಾಜೇಂದ್ರ ಎಂ., ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೋಹಿಣಿ ಕೆ., ಟ್ರಸ್ಟಿಗಳಾದ ಹರೀಶ್ ಕಾರಿಂಜ, ಗಣೇಶ್ ನಾವೂರು, ತನಿಯಪ್ಪ ನಲ್ಕೆ, ತಿಮ್ಮಪ್ಪ ಗೋಲ್ತರ, ಶ್ರೀಮತಿ ಪೂರ್ಣಿಮ ಧರ್ಣಪ್ಪ ಮೂಲ್ಯ, ನಾವೂರಿನ ವೈದ್ಯರಾದ ಡಾ| ಪ್ರದೀಪ್ ಮೊದಲಾದವರು ಉಪಸ್ಥಿತರಿದ್ದರು.

ಕಳೆದ 8 ವರ್ಷಗಳಿಂದ ಪ್ರತಿ ಬುಧವಾರ ನಾವೂರು ದೇವಸ್ಥಾನದಲ್ಲಿ ಭಗವದ್ಗೀತಾ ಪಾಠ-ಪಠಣ ತರಗತಿ ನಡೆಯುತ್ತಿದ್ದು ವಿದ್ಯಾರ್ಥಿಗಳು ಈಗಾಗಲೇ 12 ಹಾಗೂ 15 ಅಧ್ಯಾಯವನ್ನು ಕಂಠಪಾಠ ಮಾಡಿರುತ್ತಾರೆ. ಈ ವರ್ಷ 16 ಅಧ್ಯಾಯದ ಪಾಠ ಮುಂದುವರಿಯಲಿದ್ದು ಊರಿನ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಳ್ಳುತ್ತಿದ್ದಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಕೆಲ್ಲಗುತ್ತು ಪರಿಸರದಲ್ಲಿ ಚಿರತೆ ಓಡಾಟ : ಎಚ್ಚರಿಕೆ ವಹಿಸುವಂತೆ ಪ.ಪಂ ನಿಂದ ಸೂಚನೆ

Suddi Udaya

ಕರಾಯ: ನೀರು ಕುಡಿಯುವ ನೆಪದಲ್ಲಿ ಮನೆಯೊಳಗೆ ಬಂದು ಮಹಿಳೆಯ ಚಿನ್ನಾಭರಣ ದೋಚಿ ಪರಾರಿ

Suddi Udaya

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಮೈಸೂರು ಸಂಸ್ಥಾನದ ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

Suddi Udaya

ವೇಣೂರು: ಸಹೋದರರಿಬ್ಬರಿದ್ದ ಬೈಕ್ ಗೆ ಗೂಡ್ಸ್ ರಿಕ್ಷಾ ಡಿಕ್ಕಿ: ಓರ್ವ ಸ್ಥಳದಲ್ಲೇ ಮೃತ್ಯು, ಮತ್ತೋರ್ವನಿಗೆ ಗಂಭೀರ ಗಾಯ

Suddi Udaya
error: Content is protected !!