23.7 C
ಪುತ್ತೂರು, ಬೆಳ್ತಂಗಡಿ
April 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ

ನೆರಿಯ: ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾ, ಬೆಂಗಳೂರು ಹಾಗೂ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಇವರ ಸಹಯೋಗದೊಂದಿಗೆ ಪ್ರಗತಿಪರ ಕೃಷಿಕ ರಾಧಾಕೃಷ್ಣ ಹೆಬ್ಬಾರ್ ರವರ ಸಹಕಾರದಲ್ಲಿ ಜೂನ್ 1ರಂದು ಶ್ರೀ ಉಮಾ ಪಂಚಲಿಂಗೇಶ್ವರ ದೇವಸ್ಥಾನ ಅಪ್ಪೆಲ ಬಯಲು, ನೆರಿಯದಲ್ಲಿ ಬಿದಿರು ಕೃಷಿ ಮಾಹಿತಿ ಸಭೆ ಜರುಗಿತು.

ಬ್ಯಾಂಬೊ ಸೊಸೈಟಿ ಆಫ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕ ಎ. ನಾರಾಯಣ ಮೂರ್ತಿ (IಈS ಖಣಜ.) ಕಾರ್ಯಕ್ರಮ ಉದ್ಘಾಟಿಸಿ ಬಿದಿರು ಕೃಷಿ ಮಾಡುವ ವಿಧಾನ ಮತ್ತು ಬಿದಿರು ಉತ್ಪನ್ನಗಳಿಗೆ ಇರುವ ಜಾಗತಿಕ ಬೇಡಿಕೆ ಬಗ್ಗೆ ಸೇರಿದ ಕೃಷಿಕರಿಗೆ ಮಾಹಿತಿ ನೀಡಿದರು.

ಬ್ಯಾಂಬೊ ಸೊಸೈಟಿಯ ಅಧ್ಯಕ್ಷ ಪುನತಿ ಶ್ರೀಧರ್ (IಈS ಖಣಜ.) ಬಿದಿರು ಕೃಷಿಯ ಅವಶ್ಯಕತೆಗಳು ಹಾಗೂ ಬೆಳ್ತಂಗಡಿ ತಾಲೂಕಿನಲ್ಲಿ ಮಾದರಿ ಬಿದಿರು ಕೃಷಿ ಪ್ರದೇಶವನ್ನು ಮಾಡುವ ಉದ್ದೇಶ ಬ್ಯಾಂಬೊ ಸೊಸೈಟಿಗಿದ್ದು, ಆಸಕ್ತ ಕೃಷಿಕರಿಗೆ ಉಚಿತ ಬಿದಿರು ಸಸಿಗಳ ಜೊತೆಗೆ ಪ್ರೋತ್ಸಾಹವನ್ನು ರಬ್ಬರು ಸೊಸೈಟಿ ಮೂಲಕ ನೀಡುವುದಾಗಿ ತಿಳಿಸಿದರು.

ಬಿದಿರು ಕೃಷಿಯಲ್ಲಿ ತೊಡಗಿಕೊಂಡಿರುವಂತಹ ನೆರಿಯದ ರಾಧಾಕೃಷ್ಣ ಹೆಬ್ಬಾರ್ ಇವರು ಕೃಷಿಯನ್ನು ಮಾಡುವ ಸಂದರ್ಭದಲ್ಲಿ ಇರುವ ಸವಾಲುಗಳು ಹಾಗೂ ಕೃಷಿಯ ವಿಧಾನಗಳನ್ನು ತಮ್ಮ ಬಿದಿರು ತೋಟದ ಪ್ರಾತ್ಯಕ್ಷಿಕೆಯೊಂದಿಗೆ ವಿವರಿಸಿದರು.

ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯ ಸಹಾಯಕ ಅಧೀಕ್ಷಕ ಶ್ರೀಧರ್ ಮಾತನಾಡಿ ಬಿದಿರು ಕೃಷಿಗೆ ಇಲಾಖೆಯಿಂದ ಸಿಗಬಹುದಾದ ಪ್ರೋತ್ಸಾಹದ ಬಗ್ಗೆ ತಿಳಿಸಿದರು.

ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಯವರು ಮತ್ತು ಸಿಬ್ಬಂದಿ ಭಾಗವಹಿಸಿದ್ದರು.ರಬ್ಬರ್ ಸೊಸೈಟಿ ಅಧ್ಯಕ್ಷರಾದ ಶ್ರೀ ಶ್ರೀಧರ ಜಿ ಭಿಡೆ ಯವರು ಅಧ್ಯಕ್ಷತೆ ವಹಿಸಿ ಶುಭಹಾರೈಸಿದರು.

ರಬ್ಬರ್ ಸೊಸೈಟಿ ಮುಖ್ಯಕಾರ್ಯನಿರ್ವಾಹಣಾಧಿಕಾರಿ ರಾಜು ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಂಘದ ಉಪಾಧ್ಯಕ್ಷ ಎಂ. ಅನಂತ ಭಟ್ ವಂದಿಸಿದರು.

Related posts

ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಅಳದಂಗಡಿ ಮಹಾಶಕ್ತಿಕೇಂದ್ರದ ಸಭೆ

Suddi Udaya

ಸೆ.7-9: ಪಡಂಗಡಿ ಶ್ರೀ ಕ್ಷೇತ್ರ ಓಡೀಲು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಪಾಲಡ್ಕ ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ಧರ್ಣಪ್ಪ ಕುಲಾಲ್, ಉಪಾಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ

Suddi Udaya

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya

ನಾವೂರುನಲ್ಲಿ ಬೃಹತ್ ಉಚಿತ ಕಣ್ಣಿನ ಹಾಗೂ ಹೃದಯ ತಪಾಸಣಾ ಶಿಬಿರ

Suddi Udaya
error: Content is protected !!