23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮಕ್ಕೆ ಹೊಂಡ ರಚನೆ, ಶಾಲಾ ಕೈತೋಟ ರಚನೆ, ಮಡಂತ್ಯಾರು ಹಾಗೂ ಮಚ್ಚಿನ, ಪಾಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ಸುಭಾಷ್, ಸೇವಾ ಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಡಂತ್ಯಾರು ಘಟಕದ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ಯೋಗೀಶ್ ಕೋಡ್ಲಕ್ಕೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಸತೀಶ್ ಆಚಾರ್ಯ ಮತ್ತು ಮಚ್ಚಿನ -ಪಾಲಡ್ಕ ಘಟಕದ ಪ್ರಭಾಕರ ಮುದಲಡ್ಕ, ಹೊನ್ನಪ್ಪ ಮೂಲ್ಯ, ಜಯ ಪೂಜಾರಿ, ಅವಿನಾಶ್ ಶ್ರಮದಾನದಲ್ಲಿ ಸಹಕರಿಸಿದರು.

Related posts

ಮಡಂತ್ಯಾರು ಗ್ರಾ.ಪಂ ಮಾಜಿ ಸದಸ್ಯ ಸತೀಶ್ ಶೆಟ್ಟಿ ಕುರ್ಡುಮೆ ನಿಧನ

Suddi Udaya

ದ.ಕ. ಜಿಲ್ಲಾ ಬಿ.ಎಂ.ಎಸ್ ವತಿಯಿಂದ ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಅಳದಂಗಡಿ: ಆಯಾನ್ಸ್ ಮೊಬೈಲ್ ಮಾಲಕ ಅರಿಹಂತ್ ಜೈನ್ ರವರ ಪತ್ನಿ ಪಲ್ಲವಿ ಜೈನ್ ನಿಧನ

Suddi Udaya

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya

ಕೊಕ್ರಾಡಿ ಅತ್ರಿಜಾಲ್ ನಿಂದ ಕುತ್ಲೂರು ಸಂಪರ್ಕಿಸುವ ರಸ್ತೆಯ ಸೇತುವೆ ಕುಸಿದು ರಸ್ತೆ ಸಂಪರ್ಕ ಕಡಿತ ಅಡಿಕೆ ಮರದ ತಾತ್ಕಾಲಿಕ ಸೇತುವೆ ನಿರ್ಮಾಸಿ ಸಂಚಾರಕ್ಕೆ ಅವಕಾಶ ಕಲ್ಪಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಪ್ರಾರಂಭ

Suddi Udaya
error: Content is protected !!