23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜು

ಮಚ್ಚಿನ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರಮದಾನ ಕಾರ್ಯಕ್ರಮ

ಮಚ್ಚಿನ: ಗುರುವಾಯನಕೆರೆ ಯೋಜನ ಕಛೇರಿ ವ್ಯಾಪ್ತಿಯ ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಜೂ.5ರಂದು ನಡೆಯಲಿರುವ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಪೂರ್ವ ತಯಾರಿಯಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್, ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಗಿಡ ನಾಟಿ ಕಾರ್ಯಕ್ರಮಕ್ಕೆ ಹೊಂಡ ರಚನೆ, ಶಾಲಾ ಕೈತೋಟ ರಚನೆ, ಮಡಂತ್ಯಾರು ಹಾಗೂ ಮಚ್ಚಿನ, ಪಾಲಡ್ಕ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರ ನೇತೃತ್ವದಲ್ಲಿ ಶ್ರಮದಾನ ನಡೆಯಿತು.

ಈ ಸಂದರ್ಭದಲ್ಲಿ ವಲಯ ಮೇಲ್ವಿಚಾರಕ ವಸಂತ ಕುಮಾರ್ ರವರು ಮಾಹಿತಿ ಮಾರ್ಗದರ್ಶನ ನೀಡಿದರು. ಶಾಲಾ ಶಿಕ್ಷಕ ಸುಭಾಷ್, ಸೇವಾ ಪ್ರತಿನಿಧಿ ಪರಮೇಶ್ವರ್, ಶ್ರೀಮತಿ ಹರಿಣಾಕ್ಷಿ ಉಪಸ್ಥಿತರಿದ್ದರು.
ಮಡಂತ್ಯಾರು ಘಟಕದ ಬಾಲಕೃಷ್ಣ ಹಾರಬೆ, ದಯಾನಂದ ಹಚ್ಚಬೆ, ಯೋಗೀಶ್ ಕೋಡ್ಲಕ್ಕೆ, ಸುಜೀತ್ ಕುಮಾರ್, ಪುರುಷೋತ್ತಮ ಪುಂಜಾಲಕಟ್ಟೆ, ಸತೀಶ್ ಆಚಾರ್ಯ ಮತ್ತು ಮಚ್ಚಿನ -ಪಾಲಡ್ಕ ಘಟಕದ ಪ್ರಭಾಕರ ಮುದಲಡ್ಕ, ಹೊನ್ನಪ್ಪ ಮೂಲ್ಯ, ಜಯ ಪೂಜಾರಿ, ಅವಿನಾಶ್ ಶ್ರಮದಾನದಲ್ಲಿ ಸಹಕರಿಸಿದರು.

Related posts

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ರೇಡಿಯೋಲಜಿ ವಿಭಾಗ ಮತ್ತು ನೂತನ ಸಿ.ಟಿ. ಸ್ಕ್ಯಾನಿಂಗ್ ಪ್ರಾರಂಭೋತ್ಸವ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಆ. 7 -16: ಮಡಂತ್ಯಾರು ನೂತನ್ ಕ್ಲೋತ್ ಸೆಂಟರ್ ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!