September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿಸಂಘ-ಸಂಸ್ಥೆಗಳು

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಗರ್ಡಾಡಿ ವಲಯದ ಭಜನಾ ಮಂಡಳಿಗಳ ಸಭೆ

ಗರ್ಡಾಡಿ: ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಧರ್ಮಸ್ಥಳ (ರಿ.) ಇದರ ವಲಯ ಭಜನಾ ಮಂಡಳಿಗಳ ಸಭೆಯು ಗರ್ಡಾಡಿ ಶ್ರೀ ನಂದಿಕೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ನೆರವೇರಿಸಿ, ಮನೆ ಮನೆ ಭಜನೆಯ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ವಾರದ ಭಜನೆಯನ್ನು ನಿರ್ದಿಷ್ಟ ದಿನದಂದು ಮಾಡುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಗಳು ನಡೆಯಬೇಕು. ಖಾವಂದರ ಆಶಯದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಕಮ್ಮಟದ ಮುಖಾಂತರ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಭಜನೆಯು ಧನಾತ್ಮಕ ಚಿಂತನೆಗಳೆಡೆಗೆ ಕೊಂಡೊಯ್ಯುವ ಸಾಧನವಾಗಿದೆ ಎಂದು ಮಾಹಿತಿ ನೀಡಿದರು.

ಯೋಜನಾಧಿಕಾರಿ ದಯಾನಂದ ಪೂಜಾರಿ, ಸಂಪನ್ಮೂಲ ವ್ಯಕ್ತಿಯಾದ ಜಿಲ್ಲಾ ಸಮನ್ವಯಾಧಿಕಾರಿ ಸಂತೋಷ್ ಪಿ. ಅಳಿಯೂರು ಹಾಗೂ ಭಜನಾ ತರಬೇತುದಾರ ಸಂದೇಶ್, ವಲಯದ ಭಜಕರು ಮತ್ತು ಸೇವಾ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಗರ್ಡಾಡಿ ವಲಯ ಭಜನಾ ಪರಿಷತ್‌ನ ನೂತನ ಅಧ್ಯಕ್ಷರಾಗಿ ಶಿವಪ್ರಸಾದ್, ಉಪಾಧ್ಯಕ್ಷರಾಗಿ ಜಯರಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ಸಂದೇಶ್ ಮದ್ದಡ್ಕ, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಬುಳೆಕಾರ, ಕೋಶಾಧಿಕಾರಿಯಾಗಿ ಪ್ರಕಾಶ್ ಪೆರ್ಮುಡ, ಸದಸ್ಯರುಗಳಾಗಿ ಚೈತನ್ಯ ಹಾಗೂ ಚೇತನ್ ಆಯ್ಕೆಯಾದರು.

ವಲಯ ಮೇಲ್ವಿಚಾರಕಿ ಶ್ರೀಮತಿ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಯ್ಯೂರು ಶ್ರೀ ಪಂಚದುರ್ಗ ಪರಮೇಶ್ವರಿ ಯಕ್ಷಗಾನ ಸಂಘ ಹಾಗೂ ದಿ. ಹೊನ್ನಪ್ಪ ಗೌಡರ ಅಭಿಮಾನಿ ಬಳಗದಿಂದ ಯಕ್ಷಗಾನ ತಾಳಮದ್ದಳೆ ಮತ್ತು ನುಡಿ ನಮನ ಕಾರ್ಯಕ್ರಮ

Suddi Udaya

ಫೆ.26: ಬೆಳಂಗಡಿಯಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ನ್ಯಾಯತರ್ಪು: ಜಾರಿಗೆಬೈಲು ಮಸೀದಿ ಬಳಿ ತಂಡಗಳ ನಡುವೆ ಹಲ್ಲೆ: ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ಮತನ್ ಗೋಪಾಲ್ ಹಾಗೂ ಪೂರ್ವ ಲಯನ್ಸ್ ಅಂತಾರಾಷ್ಟ್ರೀಯ ನಿರ್ದೇಶಕರಾದ ವಂಶಿಧರ್ ಬಾಬು ದಂಪತಿಗಳಿಗೆ ಗೌರಾರ್ಪಣೆ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಹುಭಾಷೆ ಕವಿಗೋಷ್ಠಿಯಲ್ಲಿ 15 ಕವಿಗಳಿಂದ 7 ಭಾಷೆಯಲ್ಲಿ ಕವನ‌ ಮಂಡನೆ

Suddi Udaya
error: Content is protected !!