ಎಸ್ ಎಸ್ ಎಲ್ ಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಗೆ ಮಂಜುಶ್ರೀ ಸೀನಿಯರ್ ಚೇಂಬರಿಂದ ಸನ್ಮಾನ

Suddi Udaya

ಬೆಳ್ತಂಗಡಿ : ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆಗೈದ ರಾಜ್ಯಕ್ಕೆ ದ್ವಿತೀಯ ಸ್ಥಾನ ಹಾಗೂ ಬೆಳ್ತಂಗಡಿಗೆ ಪ್ರಥಮ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಚಿನ್ಮಯ್ ಜಿಕೆ ಇವರನ್ನು
ಮಂಜುಶ್ರೀ ಸೀನಿಯರ್ ಚೇಂಬರ್ ನಿಂದ ಜೂ 3ರಂದು ಚಿನ್ಮಯ್ ಇವರ ಮನೆಯಲ್ಲಿ ಸನ್ಮಾನ ಮಾಡಲಾಯಿತು.


ಈ ಸಂದರ್ಭದಲ್ಲಿ ಮಂಜುಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷ ವಾಲ್ಟರ್ ಸಿಖ್ವೇರಾ, ಕಾರ್ಯದರ್ಶಿ ಜಾನ್ ಆರ್ವಿನ್ ಡಿಸೋಜ, ರಾಷ್ಟ್ರೀಯ ಸೀನಿಯರ್ ಚೇಂಬರ್ ನ ಉಪಾಧ್ಯಕ್ಷ ಪ್ರಮೋದ್ ಆರ್ ನಾಯಕ್., ಸದಸ್ಯರಾದ ಸಂತೋಷ್ ಹೆಗ್ಡೆ, ಮಂಜುನಾಥ ರೈ ಉಪಸ್ಥಿತರಿದ್ದರು.

Leave a Comment

error: Content is protected !!