26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ. ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಬೆಳ್ತಂಗಡಿ ಕ್ಯಾಂಪ್ಕೋ ದಿಂದ ಸಹಾಯಧನ ಹಸ್ತಾಂತರ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಓಡಿಲ್ನಾಳ: ಮೈರಲ್ಕೆ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ

Suddi Udaya

ಅ.11: ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಂತಿವನ ಟ್ರಸ್ಟ್ , ಶ್ರೀ ಕ್ಷೇ.ಧ. ಗ್ರಾ.ಯೋ. ಹೆಚ್.ಡಿ ಕೋಟೆ ಇದರ ಆಶ್ರಯದಲ್ಲಿ ಪಂಚಮುಖಿ ವ್ಯಕ್ತಿತ್ವ ವಿಕಸನ ಯೋಗ ಶಿಬಿರದ ಉದ್ಘಾಟನೆ

Suddi Udaya

ತೋಟಾತ್ತಾಡಿ:ಜುಗಾರಿ ಅಡ್ಡೆಗೆ ಪೊಲೀಸರ ದಾಳಿ

Suddi Udaya

ನಿಡ್ಲೆ ಗ್ರಾಮದ ಕಾಂಗ್ರೆಸ್ ಬೆಂಬಲಿಗರು ಹರೀಶ್ ಪೂಂಜ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!