22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ. ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ಜೀರ್ಣೋದ್ಧಾರಕ್ಕೆ 1,ಲಕ್ಷ ದೇಣಿಗೆ

Suddi Udaya

ಮಡಂತ್ಯಾರುವಿನಲ್ಲಿ ವೈಭವದ ಮೊಸರು ಕುಡಿಕೆ ಉತ್ಸವ-ಸಾಧಕರಿಗೆ ಸನ್ಮಾನ, ಧಾರ್ಮಿಕ ಕಾರ್ಯಕ್ರಮ

Suddi Udaya

ಭಗೀನಿಯರ ಸುವರ್ಣ ಸಂಭ್ರಮ: ಧರ್ಮಾಧ್ಯಕ್ಷರಿಂದ ಗೌರವ ಮತ್ತು ಅಭಿನಂದನೆ

Suddi Udaya

ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ : ಬೆಳ್ತಂಗಡಿಯ ಎಸ್.ಡಿ.ಎಂ ಶಾಲೆಗೆ ಪ್ರಶಸ್ತಿ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

Suddi Udaya
error: Content is protected !!