23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ. ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಉಜಿರೆ:ಓಷಿಯಾನ್ ಪರ್ಲ್ ಗೆ ಹರ್ಷ ಗುಪ್ತ ಬೇಟಿ

Suddi Udaya

ಬಂದಾರು-ಕೊಕ್ಕಡ ಗ್ರಾಮವನ್ನು ಬೆಸೆಯುವ ಮೈಪಾಲ ಸೇತುವೆ ಕಾಮಗಾರಿ ವೀಕ್ಷಿಸಿದ ಶಾಸಕ ಹರೀಶ್ ಪೂಂಜ

Suddi Udaya

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ಘಟಕದ ನೇತೃತ್ವದಲ್ಲಿ ಮಾತೃ ದೇವೋ ಭವ ಗೂಗಲ್ ಮೀಟ್ ಉಪನ್ಯಾಸ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ನಾರಾವಿ ಸೂರ್ಯನಾರಾಯಣ ದೇವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!