March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಜಿಲ್ಲಾ ಸುದ್ದಿತಾಲೂಕು ಸುದ್ದಿರಾಜಕೀಯವರದಿ

ಭಾರಿ ಮತಗಳ ಅಂತರದಿಂದ ಬ್ರಿಜೇಶ್ ಚೌಟ ಗೆಲುವು: ಬೆಳ್ತಂಗಡಿಯಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

ಬೆಳ್ತಂಗಡಿ: ದಕ್ಷಿಣಕನ್ನಡ ಲೋಕಸಭಾ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಗೆದ್ದು ಬೀಗಿದ್ದಾರೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ನ ಪದ್ಮರಾಜ್ ಅವರ ವಿರುದ್ಧ 149208 ಮತಗಳ ಅಂತರದಿಂದ ಗೆಲುವನ್ನು ಸಾಧಿಸಿದ್ದಾರೆ.

ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಕಚೇರಿಯ ಮುಂಭಾಗ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯ ಘೋಷ ಕೂಗಿ ಸಂಭ್ರಮಿಸಿದ್ದಾರೆ.


ಈ ಸಂದರ್ಭದಲ್ಲಿ ವಿಧಾನಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್, ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ
ಜಯಾನಂದ ಗೌಡ, ಪ್ರಶಾಂತ್ ಪಾರೆಂಕಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕೊರಗಪ್ಪ ಗೌಡ, ಜಿಲ್ಲಾ ಕಾರ್ಯದರ್ಶಿ ವಸಂತಿ ಮಚ್ಚಿನ, ಪಟ್ಟಣ ಪಂಚಾಯತ್ ಸದಸ್ಯರಾದ ಲೋಕೇಶ್, ಶರತ್ ಕುಮಾರ್ ಶೆಟ್ಟಿ,. ಪ್ರಮುಖರಾದ ಗಿರೀಶ್ ಡೋಂಗ್ರೆ, ಆಶಾ ಸಲ್ದಾನ, ವಿಠಲ್ ಆಚಾರ್ಯ, ವಿಶ್ವ ಸಂತೆಕಟ್ಟೆ., ಅರವಿಂದ ಶೆಟ್ಟಿ., ಜಗನ್ನಾಥ್ , ಹರೀಶ್ ಗೇರುಕಟ್ಟೆ. ಅಮಿತಾ ಕುಶಾಲಪ್ಪಗೌಡ, ರಾಜೇಶ್ ಪ್ರಭು, ರಾಜೇಶ್ ಪೆರ್ಬುಂಡ, ವೇದಾವತಿ ನಾವೂರು, ಪೂರ್ಣಿಮಾ ಮುಂಡಾಜೆ, ತುಳಸಿ ಮುಂತಾದವರು ಉಪಸ್ಥಿರಿದ್ದರು.

Related posts

ಸೆ.23: ಬೆಳ್ತಂಗಡಿ ಸುನ್ನೀ ಕೋ-ಆರ್ಡಿನೇಶನ್ ಸಮಿತಿ ವತಿಯಿಂದ “ಗ್ರ್ಯಾಂಡ್ ಹುಬ್ಬುರ್ರಸೂಲ್ ಮಜ್ಲಿಸ್‌” ವಿಶೇಷ ಮೌಲಿದ್ ಪಾರಾಯಣ ಹಾಗೂ ಬುರ್ದಾ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಕ್ರೀಡಾಕೂಟ: ನಯನಾಡು ಸರಕಾರಿ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಕೊಜಪ್ಪಾಡಿ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಯ್ಯೂ ರು:ಪೋಷಕರ ಸಭೆ

Suddi Udaya

ಕುವೆಟ್ಟು ಶಕ್ತಿಕೇಂದ್ರ ವ್ಯಾಪ್ತಿಯಲ್ಲಿ ಸಾಮರಸ್ಯದ ಸಂಕ್ರಾಂತಿ ಕಾರ್ಯಕ್ರಮ

Suddi Udaya
error: Content is protected !!