July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಾವಳಿ ಹಿಂದುತ್ವದ ಭದ್ರಕೋಟೆ : ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ :ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಜಿಯವರ ನೇತೃತ್ವದ ಎನ್. ಡಿ. ಎ. ಮೈತ್ರಿಕೂಟ ಮೂರನೇ ಬಾರಿಗೆ ಜನಾದೇಶ ಪಡೆದುಕೊಂಡಿದ್ದಕ್ಕೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಪ್ರಚಂಡ ಬಹುಮತದಿಂದ ವಿಜಯಶಾಲಿಗಳಾಗಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಸ ವ್ಯಕ್ತಪಡಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಆಡಳಿತಯಂತ್ರ ದುರುಪಯೋಗಪಡಿಸಿಕೊಂಡು ಅಪವಾದ ಅಪಪ್ರಚಾರಗಳ ನಡುವೆ ನಡೆಸಿದ ಈ ಚುನಾವಣೆಯಲ್ಲಿ ಕರಾವಳಿಯ ಜನತೆ ಈ ಚುನಾವಣೆಯಲ್ಲಿ ಕಾಂಗ್ರೆಸ್ ನ್ನು ಸರಸಗಟಾಗಿ ತಿರಸ್ಕರಿಸಿ ಹಿಂದುತ್ವದ ಭದ್ರಕೋಟೆಯನ್ನು ಪುಡಿಗಟ್ಟಲು ಅಸಾಧ್ಯವೆಂಬ ಸಂದೇಶವನ್ನು ಸ್ಪಷ್ಟವಾಗಿ ನೀಡಿರುತ್ತಾರೆ. ಪ್ರಥಮ ಬಾರಿಗೆ ಲೋಕಸಭೆಯನ್ನು ಪ್ರವೇಶಸಲಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಹಾಗೂ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಅಭಿನಂದನೆಗಳನ್ನು ಸಲ್ಲಿಸಿ ಬೆಳ್ತಂಗಡಿಯಲ್ಲಿ 2019,2023 ಹಾಗೂ 2024 ರ ಸಾರ್ವತ್ರಿಕ ಲೋಕಸಭೆ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಯ ಮತಗಳಿಕೆಯನ್ನು ಒಂದು ಲಕ್ಷಕ್ಕೂ ಮಿಗಿಲಾಗಿ ನೀಡಿ “ತ್ರೀಸ್ ರೀ ಬಾರ್ ಏಕ್ ಲಾಕ್ ಪಾರ್” ಮಾಡಿದ ಮತದಾರ ಬಾಂಧವರಿಗೆ ಶಾಸಕ ಹರೀಶ್ ಪೂಂಜ ಮನದಾಳದ ಕೃತಜ್ಞತೆಯನ್ನು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿರುತ್ತಾರೆ.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಂದಿ ಬಳಿ ಇರುವ ಕಾಣಿಕೆ ಡಬ್ಬಿ ಒಡೆದು ಹಣ ಕಳವು

Suddi Udaya

ಕಡಿರುದ್ಯಾವರ :ಡೆಂಗ್ಯೂ ಜ್ವರದ ಬಗ್ಗೆ ಜನ ಜಾಗೃತಿ ಅಭಿಯಾನ

Suddi Udaya

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 23.47 ಲಕ್ಷ ನಿವ್ವಳ ಲಾಭ, ಶೇ.9 ಡಿವಿಡೆಂಟ್ ಘೋಷಣೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವ್ಯಾಪಾರ ಮೇಳ

Suddi Udaya

ಕುತ್ಲೂರು ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯೆಯರಿಗೆ ಮಲ್ಲಿಗೆಯ ಕೃಷಿಯ ಬಗ್ಗೆ ಪ್ರಾತ್ಯಕ್ಷಿಕೆ

Suddi Udaya
error: Content is protected !!