ಉಜಿರೆ: ಸಿದ್ದವನ ಸ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಡಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ನೀರಚಿಲುಮೆ ಇದರ ವತಿಯಿಂದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಸಿದ್ದವನದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡಗಳ ನಾಟಿ ಮತ್ತು ಶಾಲಾ ಕೈತೋಟ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ನೀರಚಿಲುಮೆ ಒಕ್ಕೂಟದ ನೂತನ ಅಧ್ಯಕ್ಷ ದಿವಾಕರ ಪೂಜಾರಿ,
ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಜಯಂತಿ, ಯಂತ್ರಶ್ರೀ ಯೋಧರಾದ ರತ್ನಾಕರ ಗೌಡ, ಒಕ್ಕೂಟದ ಪದಾಧಿಕಾರಿಗಳು ಮತ್ತು ತಂಡದ ಸದಸ್ಯರು, ಶಾಲಾ ಮಕ್ಕಳು, ಶಾಲಾ ಮುಖ್ಯೋಪಾಧ್ಯಯರಾದ ಶ್ರೀಮತಿ ಅನುಸೂಯ ಸಹಕಾರದೊಂದಿಗೆ ಶಾಲೆಯಲ್ಲಿ ಅಡಿಕೆಯ ಗಿಡನಾಟಿ ಹಾಗು ಶಾಲಾ ಕೈತೋಟ ರಚನೆಯನ್ನು ಮಾಡಲಾಯಿತು,


ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಕೃಷಿ ಅಧಿಕಾರಿಯಾದ ರಾಮ್ ಕುಮಾರ್, ಸೇವಾಪ್ರತಿನಿಧಿ ಪ್ರಮೀಳಾ ಉಪಸ್ಥಿತರಿದ್ದರು.

Leave a Comment

error: Content is protected !!