25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

Suddi Udaya

ಬೆಳ್ತಂಗಡಿ ರೆಡ್ ಕ್ರಾಸ್ ತಂಡ ಕಳೆಂಜ ರಾಮಣ್ಣ ಗೌಡರ ಮನೆಗೆ ಭೇಟಿ

Suddi Udaya

ನೆರಿಯ: ರಸ್ತೆ ರಿಪೇರಿ ಮಾಡಿ ಮಾದರಿಯಾದ ಅಧ್ಯಾಪಕ ತಮ್ಮಯ್ಯ

Suddi Udaya

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
error: Content is protected !!