July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಬಾರ್ಯ: ಖಾಸಗಿ ಬ್ಯಾಂಕಿನ ಎಟಿಎಂ ನಿಂದ ದರೋಡೆಗೆ ಯತ್ನ

Suddi Udaya

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya

ಕುದ್ರಡ್ಕ ಶ್ರೀ‌ ಮಹಾಗಣಪತಿ ಭಜನಾ ಮಂದಿರದಲ್ಲಿ ‌ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya

ಜು.10: ಬೆಳ್ತಂಗಡಿಯಲ್ಲಿ ರೈತರಿಗೆ ವಿದ್ಯುತ್ ಸುರಕ್ಷತೆ ಕುರಿತು ತರಬೇತಿ

Suddi Udaya

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya
error: Content is protected !!