ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿ ಬಂಟ್ವಾಳದಲ್ಲಿ ಪತ್ತೆ

Suddi Udaya

ನಿವೃತ್ತ ಯೋಧ ಸುವರ್ಣ ವಿ ವರಕಬೆಯವರಿಗೆ ಸೇವಾ ಸಿಂಧೂರ ಗೌರವಾರ್ಪಣೆ

Suddi Udaya

ಬಕ್ರೀದ್ ಪ್ರಯುಕ್ತ ವೇಣೂರು ಪೊಲೀಸ್ ಸ್ಟೇಷನ್ ನಲ್ಲಿ ಶಾಂತಿ ಸಮಿತಿ ಸಭೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಧಿಕೃತ ಅಂಗಡಿಗಳ ಬಗ್ಗೆ ಕ್ರಮಕೈಗೊಳ್ಳುವಂತೆ ನ.ಪಂ. ಮುಖ್ಯಾಧಿಕಾರಿಗಳಿಗೆ ಮನವಿ

Suddi Udaya

ಸೇವಾ ನಿವೃತ್ತಿಗೊಳ್ಳುತ್ತಿರುವ ಸಹಾಯಕ ಕೃಷಿ ನಿರ್ದೇಶಕ ವೀರಭದ್ರಪ್ಪರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya
error: Content is protected !!