ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ ಆಚರಣೆ

Suddi Udaya

ಇಂದಬೆಟ್ಟು: ತೀವ್ರ ಕುತೂಹಲ ಕೆರಳಿಸಿದ್ದ ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದಬೆಟ್ಟುವಿನಲ್ಲಿ ಪಟಾಕಿ ಸಿಡಿಸಿ ಸಂಭ್ರಮ ಆಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್, ಇಂದಬೆಟ್ಟು ಗ್ರಾ.ಪಂ. ಮಾಜಿ ಅಧ್ಯಕ್ಷ ಆನಂದ ಅಡೀಲು, ಗ್ರಾ.ಪಂ ಅಧ್ಯಕ್ಷೆ ಆಶಾಲತಾ, ಗ್ರಾ.ಪಂ ಉಪಾಧ್ಯಕ್ಷೆ ಪ್ರೇಮಾ, ಗ್ರಾ.ಪಂ. ಸದಸ್ಯೆ ಸುಮಿತ್ರ, ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯದರ್ಶಿ, ಸದಸ್ಯರು, ಚುನಾಯಿತ ಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Comment

error: Content is protected !!