ಇಂದಬೆಟ್ಟು : ಶ್ರೀ ಧರ್ಮಸ್ಥಳ ಶೌರ್ಯ ಘಟಕ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಬೆಳ್ತಂಗಡಿ ತಾಲೂಕಿನ ಶ್ರೀ ಧರ್ಮಸ್ಥಳ ಶೌರ್ಯ ಘಟಕದ ವತಿಯಿಂದ ಸರಕಾರಿ ಪ್ರೌಢಶಾಲೆ ಬಂಗಾಡಿಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಡಿಯಲ್ಲಿ ಈ ಹಿಂದೆ ನಾಟಿ ಮಾಡಿರುವ ಅಡಿಕೆ ಬುಡಗಳ ಸ್ವಚ್ಛತೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಅರಣ್ಯ ಇಲಾಖೆ, ಶೌರ್ಯ ಘಟಕದಿಂದ ವತಿಯಿಂದ ಶಾಲೆಯಲ್ಲಿ ಹಣ್ಣಿನ ಗಿಡಗಳ ನಾಟಿಯನ್ನು ಮಾಡಲಾಯಿತು,

ಈ ಕಾರ್ಯಕ್ರಮದಲ್ಲಿ ಶೌರ್ಯ ಘಟಕದ ಮಾಸ್ಟರ್ ಸಂತೋಷ್ ಕುಮಾರ್, ಅರಣ್ಯ ಇಲಾಖೆ ಅಧಿಕಾರಿಗಳು, ಕೊಲ್ಲಿ-ಕಿಲ್ಲೂರು ಘಟಕದ ಸಂಯೋಜಕ ಉಮೇಶ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ಶಾಲಾ ಮಕ್ಕಳು, ಪೋಷಕರು, ಯೋಜನೆಯ ಕೃಷಿ ಅಧಿಕಾರಿ ರಾಮಕುಮಾರ್, ಮೇಲ್ವಿಚಾರಕರಾದ ಶ್ರೀಮತಿ ಉಷಾ, ಶೌರ್ಯ ಘಟಕದ ಸಂಯೋಜಕರಾದ ಕೇಶವ ಗೌಡ, ಘಟಕ ಪ್ರತಿನಿಧಿ-ಪವನ್ ಕುಮಾರ್, ಸೇವಾಪ್ರತಿನಿಧಿ ಶ್ರೀಮತಿ ಶೈಲಾ, ಘಟಕದ ಸದಸ್ಯರಾದ ಶ್ರೀಮತಿ ಹರಿಣಾಕ್ಷಿ,ಶ್ರೀಮತಿ ಯಶೋಧಾ,ಶ್ರೀ ಚಂದ್ರಶೇಖರ ಗೌಡ,ಬಾಲಕೃಷ್ಣ ಗೌಡ,ಸುಧೀಶ್ ಕುಮಾರ್, ಶ್ರೀ ವಿಶ್ವನಾಥ ಗೌಡರವರು ಉಪಸ್ಥಿತರಿದ್ದರು.

Leave a Comment

error: Content is protected !!