38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

ಉಜಿರೆ: ಪರಿಸರದ ಕಾಳಜಿ ಅತಿ ಮುಖ್ಯ. ಪರಿಸರ ಚೆನ್ನಾಗಿದ್ದರೆ ಮಾತ್ರ ನಾವು ಆರೋಗ್ಯಯುತವಾಗಿ ಬದುಕಲು ಸಾಧ್ಯ. ಮಾನವನಿಗೆ ಪೂರಕವಾದ ಒಳ್ಳೆಯ ಪರಿಸರ ಇದ್ದಿದ್ದರೆ ಪರಿಸರ ದಿನದ ಕಾರ್ಯಕ್ರಮದ ಅಗತ್ಯತೆ ಇರುವುದಿಲ್ಲ. ಪರಿಸರದ ಬಗ್ಗೆ ಸರಿಯಾದ ಪ್ರಜ್ಞೆ ಮೂಡಿಸಲು ಇಂತಹ ಕಾರ್ಯಕ್ರಮ ಸಹಕಾರಿ ಎಂದು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಹೇಳಿದರು.

ಇವರು ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ ಕಾರ್ಯಕ್ರಮ ಹಾಗೂ ಪರಿಸರ ದಿನಾಚರಣೆ ಅಂಗವಾಗಿ ಬೆಳ್ತಂಗಡಿ ತಾಲೂಕಿನಾದ್ಯಂತ ಒಂದು ವಾರಗಳ ಗಿಡಗಳನ್ನು ನೆಟ್ಟು ಪೋಷಿಸುವ ಕಾರ್ಯಕ್ರಮವನ್ನು ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಉಪ ಪ್ರಾಚಾರ್ಯ ಡಾ. ರಾಜೇಶ್ ಬಿ ಅವರು ಮುಖ್ಯ ಅಭ್ಯಾಗತರಾಗಿ ಭಾಗವಹಿಸಿ ಪರಿಸರ ಸಂರಕ್ಷಣೆ ಬಗ್ಗೆ ಮಾತನಾಡಿದರು.

ಹಾಗೆಯೇ ಸ್ವಯಂ ಸೇವಕರು ಸ್ಥಳೀಯ ಜಾಗಗಳ ಹಾಗೂ ಬಸ್ ನಿಲ್ದಾಣದ ಕಸಗಳನ್ನು ಸ್ವಚ್ಛಗೊಳಿಸಿ ಶುಚಿಗೊಳಿಸಿದರು.

ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ ಕಾರ್ಯಕ್ರಮ ನಿರ್ವಹಿಸಿದರು. ಸಹ ಯೋಜನಾಧಿಕಾರಿ ಶ್ರೀಮತಿ ಪದ್ಮಶ್ರೀ ರಕ್ಷಿತ್ ಅವರು ಸ್ವಯಂ ಸೇವಕರಿಗೆ ಮಾರ್ಗದರ್ಶನ ಮಾಡಿದರು. ಘಟಕದ ನಾಯಕ ಆದಿತ್ಯ.ವಿ.ಧನ್ಯವಾದ ಅರ್ಪಿಸಿದರು.

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಎಂಟನೇ ದಿನದ ಬ್ರಹ್ಮಕಲಶೋತ್ಸವ:

Suddi Udaya

ಧರ್ಮಸ್ಥಳ: ಪೊಸೊಳಿಕೆ ಅಂಗನವಾಡಿ ಕೇಂದ್ರದಲ್ಲಿ ಬಾಲ ಮೇಳ ಆಚರಣೆ

Suddi Udaya

ಮುಂಬೈ – ಬೆಂಗಳೂರಿನಂತಹ ಮಹಾನಗರಗಳಲ್ಲಿ ಲಭ್ಯವಿದ್ದಂತಹ ವಿವಿಧ ಕೋರ್ಸ್ ಗಳೆಲ್ಲಾ ಇದೀಗ ಪುತ್ತೂರಿನಲ್ಲೂ: VFX, AI, SAP ಕೋರ್ಸ್ ಗಳಿಗೆ ಲಕ್ಷಾಂತರ ರೂಪಾಯಿ ವ್ಯಯಿಸಬೇಕಿಲ್ಲ; ಅತೀ ಕಡಿಮೆ ಶುಲ್ಕದೊಂದಿಗೆ ನುರಿತ ತಂಡದಿಂದ ತರಬೇತಿ ನೀಡಲಿದೆ ವಿದ್ಯಾಮಾತಾ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ  ಮಾಸಿಕ ಸಭೆ: ಎಸ್ ಎಸ್ ಎಲ್ ಸಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ

Suddi Udaya

ಉಜಿರೆ: ಜಿ.ಪಂ ಮಾಜಿ ಸದಸ್ಯ ತುಂಗಪ್ಪ ಗೌಡ ಮರಕಡ ನಿಧನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕಂಪ್ಯೂಟರ್ ತರಬೇತಿ ಕಾರ್ಯಾಗಾರ

Suddi Udaya
error: Content is protected !!