April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya

ರಂಜಿತ್ ಎಚ್ ಡಿ ಯವರಿಗೆ ಜೆಸಿಐ ವಲಯ 15ರ ಅತ್ಯುತ್ತಮ ಘಟಕಾಧ್ಯಕ್ಷ ಪ್ರಶಸ್ತಿ

Suddi Udaya

ಕರ್ನಾಟಕ ವಿಧಾನಸಭಾ ಚುನಾವಣೆ: ಕೊಕ್ರಾಡಿ ಬಿಜೆಪಿ ಶಕ್ತಿ ಕೇಂದ್ರದಲ್ಲಿ ಪೂರ್ವಭಾವಿ ಸಭೆ

Suddi Udaya

ಕಣಿಯೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಚುನಾವಣಾ ಪ್ರಚಾರ

Suddi Udaya
error: Content is protected !!