25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಘಟಕದ ಸದಸ್ಯರುಗಳಿಗೆ ತರಬೇತಿ ಕಾರ್ಯಾಗಾರ

Suddi Udaya

ಮಡಂತ್ಯಾರು ಗಣೇಶೋತ್ಸವ ಸಮಿತಿಯ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya

ಅರಸಿನಮಕ್ಕಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಮಚ್ಚಿನ ಕಾರ್ಯಕ್ಷೇತ್ರದ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಟ್ಯೂಷನ್ ಕ್ಲಾಸ್ ಉದ್ಘಾಟನೆ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!