July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಕಿಲ್ಲೂರು ಸ.ಉ. ಪ್ರಾಥಮಿಕ ಶಾಲೆಯಲ್ಲಿ ಶಾಲಾ ಸಂಸತ್ತಿನ ಚುನಾವಣೆ

Suddi Udaya

ಅ.27-28 : ಸ.ಉ.ಹಿ.ಪ್ರಾ. ಶಾಲೆ ಬಜಿರೆಯಲ್ಲಿ ನಡೆಯುವ ತಾಲೂಕು ಮಟ್ಟದ ಕ್ರೀಡಾಕೂಟದ ಸಂಘಟನಾ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುಂಭಶ್ರೀ ಆಂ.ಮಾ. ಶಾಲೆ ಪಿಯು ಕಾಲೇಜಿನಲ್ಲಿ “ಮಾದಕ ವಸ್ತುಗಳ ದುರುಪಯೋಗ ವಿರೋಧಿ ಜಾಗೃತಿ ಅಭಿಯಾನ”

Suddi Udaya

ನಿಡ್ಲೆ ಹಾಗೂ ಬೂಡುಜಾಲುವಿನಲ್ಲಿ ಸೌಜನ್ಯಪರ ಹಾಕಿದ ಬ್ಯಾನರ್ ನ್ನು ಕಿತ್ತೆಸೆದ ಕಿಡಿಗೇಡಿಗಳು

Suddi Udaya
error: Content is protected !!