33.4 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

ಬಳಂಜ: ವೇಣೂರು ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀಶೈಲ್ ಡಿ ಮುರಗೋಡ್ ರವರ ಮಾರ್ಗದರ್ಶನದಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು, ಕರಂಬಾರು, ಶಿರ್ಲಾಲು ಗ್ರಾಮಗಳ ಬೀಟ್ ಪೊಲೀಸ್ ಎಚ್.ಸಿ ಬಿ.ಪಂಪಾಪತಿ ಬೀಟ್ ಸಭೆ ಮಾಡಿ ಸಾರ್ವಜನಿಕರಿಗೆ ಸೈಬರ್ ಕ್ರೈಂ ಸಂಚಾರ ನಿಯಮ ಪಾಲನೆ ಹಾಗೂ ಇತ್ತೀಚಿನ ದಿನಮಾನಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿಯನ್ನು ಬಳಂಜ ಶ್ರೀದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಸಾರ್ವಜನಿಕರು ಪ್ರಸ್ತುತ ಮಳೆಗಾಲವಾಗಿರುವುದರಿಂದ ರಾತ್ರಿ ವೇಳೆ ಮಳೆ ಬೀಳುತ್ತಿರುವ ಸಮಯ ಮಳೆ ಶಬ್ದಕ್ಕೆ ಮನೆಯ ಬಾಗಿಲು ಹೊಡೆದು ಕಳ್ಳತನ ಮಾಡುವ ತಂತ್ರಗಾರಿಕೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ತಮ್ಮ ಬೆಲೆಬಾಳುವ ಒಡವೆ /ಹಣವನ್ನು ಅಗತ್ಯಕಿಂತ ಹೆಚ್ಚು ಮನೆಯಲ್ಲಿ ಇಟ್ಟುಕೊಳ್ಳದೆ ಬ್ಯಾಂಕ್ /ಸೇಫರ್ ಲಾಕ್ ನಲ್ಲಿ ಇಡುವುದು ಉತ್ತಮ. ಸಾರ್ವಜನಿಕರು ತಮ್ಮ ಸಂಬಂಧಿಕರ ಮನೆಗೆ ತೆರಳುವಾಗ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಮನೆ ಕಡೆ ಗಮನಿಸುವಂತೆ ತಿಳಿಸಿ ತೆರಳುವುದು ಉತ್ತಮ. ಮನೆಯಲ್ಲಿ ಬೆಲೆಬಾಳುವ ವಸ್ತು / ಒಡವೆಗಳು ಇಟ್ಟುಕೊಂಡವರು ಮನೆಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳುವುದು, ಮನೆಯ ಹೊರಾಂಗಣದಲ್ಲಿ ರಾತ್ರಿವೇಳೆ ಸಾಕಷ್ಟು ಬೆಳಕಿನ ವ್ಯವಸ್ಥೆ ಇರುವಂತೆ ಮಾಡುವುದು. ಮನೆಯಲ್ಲಿ ನಾಯಿ ಸಾಕಿರುವವರು ರಾತ್ರಿವೇಳೆ ಹೊರಗಡೆ ನಾಯಿಗಳನ್ನು ಕಟ್ಟಿಹಾಕದೆ ಹೊರಗಡೆ ಬಿಡುವುದು ಒಳ್ಳೆಯದು. ಸಾರ್ವಜನಿಕರು ತಮ್ಮ ಮನೆ ಆಸುಪಾಸು ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುವ ಬಗ್ಗೆ /ವ್ಯಾಪಾರಕ್ಕೆ ಬರುವವರ ಬಗ್ಗೆ ಗಮನಿಸುವುದು ಅಗತ್ಯವಿದ್ದಲ್ಲಿ ಪೊಲೀಸ್ ಠಾಣೆಗೆ /112 ಗೆ ಕರೆಮಾಡಿ ತಿಳಿಸಿ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಪೋಲೀಸರ ಸಹಾಯ ಬೇಕಾದಲ್ಲಿ ತುರ್ತು ಪೊಲೀಸ್ ಸೇವೆ 112 ಗೆ ಕರೆಮಾಡುವುದು. ನಮ್ಮ ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವ ಮುನ್ನ ಜಾಗರೂಕರಾಗೋಣ .ಮನೆಗಳಲ್ಲಿ ಜನ ಇರುವಾಗಲೇ ಮನೆ ಬಾಗಿಲು ಹೊಡೆದು ಕಳ್ಳತನ ಮಾಡುವ ಗ್ಯಾಂಗ್ ಸಂಚರಿಸುತ್ತಿದೆ ಎಚ್ಚರಿಕೆ ವಹಿಸಿ ಅದುಲ್ಲದೆ ಆನ್ಲೈನ್ ವಂಚನೆ ಆದಲ್ಲಿ ಸಾರ್ವಜನಿಕರು 1 ಗಂಟೆ ಒಳಗಾಗಿ ಟೋಲ್ ಫ್ರೀ ನಂಬರ್ 1930 ಗೆ ಕರೆ ಮಾಡಿ ದೂರು ದಾಖಲಿಸುವುದು ಹಾಗೂ ನಿಮ್ಮ ಮೊಬೈಲ್ ಗಳಿಗೆ ಬರುವ ಬ್ಲಾಂಕ್ ಮೆಸೇಜ್ ಓಪನ್ ಮಾಡದೆ ಡಿಲೀಟ್ ಮಾಡುವುದು ಎಂಬುದಾಗಿ ಬೀಟ್ ಅಡಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

Related posts

ಮಲವಂತಿಗೆ: ಹಿರಿಯ ಕಂಬಳ ಓಟಗಾರ , ಸಾಧಕ ಕುದ್ಮಾನ್ ನಿವಾಸಿ ಲೋಕಯ್ಯ ಗೌಡ ನಿಧನ

Suddi Udaya

ರಾಜ್ಯ ಸರ್ಕಾರಿ ನೌಕರರ ವಿವಿದ್ದೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಜಯಕೀರ್ತಿಜೈನ್ ರಿಗೆ ಸನ್ಮಾನ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ 15ನೇ ವರ್ಷದ ಸಾಮೂಹಿಕ ವಿವಾಹವಧು-ವರರ ವೈಭವದ ದಿಬ್ಬಣ ಮೆರವಣಿಗೆಗೆ ಚಾಲನೆ,

Suddi Udaya

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

Suddi Udaya

ಕೊಕ್ಕಡ ವಲಯದ ಹಳ್ಳಿoಗೇರಿಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಇಂದು ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ, ವಧು-ವರರಿಗೆ ಸೀರೆ, ಧೋತಿ ವಿತರಣೆ

Suddi Udaya
error: Content is protected !!