July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಳಂಜ: ವೇಣೂರು ಆರಕ್ಷಕ ಠಾಣೆಯ ವತಿಯಿಂದ ಬೀಟ್ ಪೋಲೀಸ್ ಪಂಪಾಪತಿಯವರಿಂದ ಸಾರ್ವಜನಿಕರಿಗೆ ಸೈಬರ್ ಕ್ರೈಂ ,ಸಂಚಾರ ನಿಯಮ ಪಾಲನೆ ಹಾಗೂ ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿ

ಬಳಂಜ: ವೇಣೂರು ಠಾಣಾ ಪೊಲೀಸ್ ಉಪನಿರೀಕ್ಷಕರಾದ ಶ್ರೀಶೈಲ್ ಡಿ ಮುರಗೋಡ್ ರವರ ಮಾರ್ಗದರ್ಶನದಂತೆ ಬಳಂಜ, ನಾಲ್ಕೂರು, ತೆಂಕಕಾರಂದೂರು, ಕರಂಬಾರು, ಶಿರ್ಲಾಲು ಗ್ರಾಮಗಳ ಬೀಟ್ ಪೊಲೀಸ್ ಎಚ್.ಸಿ ಬಿ.ಪಂಪಾಪತಿ ಬೀಟ್ ಸಭೆ ಮಾಡಿ ಸಾರ್ವಜನಿಕರಿಗೆ ಸೈಬರ್ ಕ್ರೈಂ ಸಂಚಾರ ನಿಯಮ ಪಾಲನೆ ಹಾಗೂ ಇತ್ತೀಚಿನ ದಿನಮಾನಗಳಲ್ಲಿ ಕಳ್ಳತನ ಹೆಚ್ಚಾಗುತ್ತಿದ್ದು ಮುನ್ನೆಚ್ಚರಿಕೆ ಕ್ರಮದ ಬಗ್ಗೆ ಮಾಹಿತಿಯನ್ನು ಬಳಂಜ ಶ್ರೀದೈವ ಕೊಡಮಣಿತ್ತಾಯ ಆವರಣದಲ್ಲಿ ನಡೆಯಿತು.

ಸಾರ್ವಜನಿಕರು ಪ್ರಸ್ತುತ ಮಳೆಗಾಲವಾಗಿರುವುದರಿಂದ ರಾತ್ರಿ ವೇಳೆ ಮಳೆ ಬೀಳುತ್ತಿರುವ ಸಮಯ ಮಳೆ ಶಬ್ದಕ್ಕೆ ಮನೆಯ ಬಾಗಿಲು ಹೊಡೆದು ಕಳ್ಳತನ ಮಾಡುವ ತಂತ್ರಗಾರಿಕೆ ಹೆಚ್ಚಾಗುತ್ತಿದೆ. ಸಾರ್ವಜನಿಕರು ತಮ್ಮ ಬೆಲೆಬಾಳುವ ಒಡವೆ /ಹಣವನ್ನು ಅಗತ್ಯಕಿಂತ ಹೆಚ್ಚು ಮನೆಯಲ್ಲಿ ಇಟ್ಟುಕೊಳ್ಳದೆ ಬ್ಯಾಂಕ್ /ಸೇಫರ್ ಲಾಕ್ ನಲ್ಲಿ ಇಡುವುದು ಉತ್ತಮ. ಸಾರ್ವಜನಿಕರು ತಮ್ಮ ಸಂಬಂಧಿಕರ ಮನೆಗೆ ತೆರಳುವಾಗ ಪಕ್ಕದ ಮನೆಯವರಿಗೆ ಮಾಹಿತಿ ನೀಡಿ ಮನೆ ಕಡೆ ಗಮನಿಸುವಂತೆ ತಿಳಿಸಿ ತೆರಳುವುದು ಉತ್ತಮ. ಮನೆಯಲ್ಲಿ ಬೆಲೆಬಾಳುವ ವಸ್ತು / ಒಡವೆಗಳು ಇಟ್ಟುಕೊಂಡವರು ಮನೆಗೆ ಸಿಸಿ ಕ್ಯಾಮರಾ ಅಳವಡಿಸಿಕೊಳ್ಳುವುದು, ಮನೆಯ ಹೊರಾಂಗಣದಲ್ಲಿ ರಾತ್ರಿವೇಳೆ ಸಾಕಷ್ಟು ಬೆಳಕಿನ ವ್ಯವಸ್ಥೆ ಇರುವಂತೆ ಮಾಡುವುದು. ಮನೆಯಲ್ಲಿ ನಾಯಿ ಸಾಕಿರುವವರು ರಾತ್ರಿವೇಳೆ ಹೊರಗಡೆ ನಾಯಿಗಳನ್ನು ಕಟ್ಟಿಹಾಕದೆ ಹೊರಗಡೆ ಬಿಡುವುದು ಒಳ್ಳೆಯದು. ಸಾರ್ವಜನಿಕರು ತಮ್ಮ ಮನೆ ಆಸುಪಾಸು ಯಾರಾದರೂ ಅನುಮಾನಾಸ್ಪದ ವ್ಯಕ್ತಿಗಳು ತಿರುಗಾಡುವ ಬಗ್ಗೆ /ವ್ಯಾಪಾರಕ್ಕೆ ಬರುವವರ ಬಗ್ಗೆ ಗಮನಿಸುವುದು ಅಗತ್ಯವಿದ್ದಲ್ಲಿ ಪೊಲೀಸ್ ಠಾಣೆಗೆ /112 ಗೆ ಕರೆಮಾಡಿ ತಿಳಿಸಿ. ಸಾರ್ವಜನಿಕರು ಯಾವುದೇ ಸಂದರ್ಭದಲ್ಲಿ ಪೋಲೀಸರ ಸಹಾಯ ಬೇಕಾದಲ್ಲಿ ತುರ್ತು ಪೊಲೀಸ್ ಸೇವೆ 112 ಗೆ ಕರೆಮಾಡುವುದು. ನಮ್ಮ ಅಮೂಲ್ಯವಾದ ವಸ್ತುಗಳನ್ನು ಕಳೆದುಕೊಳ್ಳುವ ಮುನ್ನ ಜಾಗರೂಕರಾಗೋಣ .ಮನೆಗಳಲ್ಲಿ ಜನ ಇರುವಾಗಲೇ ಮನೆ ಬಾಗಿಲು ಹೊಡೆದು ಕಳ್ಳತನ ಮಾಡುವ ಗ್ಯಾಂಗ್ ಸಂಚರಿಸುತ್ತಿದೆ ಎಚ್ಚರಿಕೆ ವಹಿಸಿ ಅದುಲ್ಲದೆ ಆನ್ಲೈನ್ ವಂಚನೆ ಆದಲ್ಲಿ ಸಾರ್ವಜನಿಕರು 1 ಗಂಟೆ ಒಳಗಾಗಿ ಟೋಲ್ ಫ್ರೀ ನಂಬರ್ 1930 ಗೆ ಕರೆ ಮಾಡಿ ದೂರು ದಾಖಲಿಸುವುದು ಹಾಗೂ ನಿಮ್ಮ ಮೊಬೈಲ್ ಗಳಿಗೆ ಬರುವ ಬ್ಲಾಂಕ್ ಮೆಸೇಜ್ ಓಪನ್ ಮಾಡದೆ ಡಿಲೀಟ್ ಮಾಡುವುದು ಎಂಬುದಾಗಿ ಬೀಟ್ ಅಡಿಯಲ್ಲಿ ಸಾರ್ವಜನಿಕರಿಗೆ ಮಾಹಿತಿ ನೀಡಿದರು.

Related posts

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಕಂಠಿ ಉತ್ಸವಕ್ಕೆ ಚಾಲನೆ ಹಾಗೂ ಕೃಷಿ ಸಾಧಕರಿಗೆ ” ಶ್ರೇಷ್ಠ ಕೃಷಿ ಸಾಧಕ ” ಪ್ರಶಸ್ತಿ

Suddi Udaya

ಶ್ರೀ ದೈವ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತುಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ- ಬ್ರಹ್ಮಕುಂಭಾಭಿಷೇಕ ಆಮಂತ್ರಣ ಪತ್ರಿಕೆ ವಿತರಣೆ

Suddi Udaya

ಬೆಳ್ತಂಗಡಿ: ಹಳೆಕೋಟೆ ಡಿಸ್ಕೌಂಟ್ ಸೇಲ್ ಬಟ್ಟೆ ಮತ್ತು ಚಪ್ಪಲಿ ಅಂಗಡಿಯವರಿಂದ ವಯನಾಡ್ ನೆರೆ ಸಂತ್ರಸ್ತರಿಗೆ ದಿ‌ನಬಳಕೆ ವಸ್ತುಗಳ ಸಹಾಯಹಸ್ತ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ಮ್ಯಾನೇಜ್ಮೆಂಟ್ ಫೆಸ್ಟ್ “

Suddi Udaya

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya
error: Content is protected !!