24.4 C
ಪುತ್ತೂರು, ಬೆಳ್ತಂಗಡಿ
May 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಜ.12: ಬಳಂಜ ಬದಿನಡೆಯಲ್ಲಿ ಅಯ್ಯಪ್ಪ ಪೂಜೆ, ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವರ ಸಂಭ್ರಮದ ಬ್ರಹ್ಮಕಲಶೋತ್ಸವ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಮೇ 22: ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!