July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಧರ್ಮಸ್ಥಳ : ಮುಳಿಕ್ಕಾರು ನಿವಾಸಿ ವಿನುತ ನೇಣುಬಿಗಿದು ಆತ್ಮಹತ್ಯೆ

Suddi Udaya

ಅಳದಂಗಡಿ ಚಾಣಕ್ಯ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya

ಜ 29 :ನಾವೂರು ಗೋಪಾಲಕೃಷ್ಣ ದೇವಸ್ಥಾನದಲ್ಲಿ ಬೃಹತ್ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ: ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಪೂರ್ವಭಾವಿ ಸಭೆ

Suddi Udaya

ಅರಸಿನಮಕ್ಕಿ: ಕಾರ್ಗಿಲ್ ಕದನದ 25 ವರ್ಷದ ನೆನಪಿಗಾಗಿ ಪ್ರೌಢ ಶಾಲಾ ವಿದ್ಯಾರ್ಥಿಗಳೊಂದಿಗೆ ಸಂವಾದ ಮತ್ತು ಸನ್ಮಾನ ಕಾರ್ಯಕ್ರಮ

Suddi Udaya

ಮಂಗಳೂರಿನ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಇವರ ನೇತೃತ್ವದಲ್ಲಿ ನಡೆಯುವ ಗಣೇಶೋತ್ಸವಕ್ಕೆ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದಿಂದ ಹೊರಕಾಣಿಕೆ ಸಮರ್ಪಣೆ

Suddi Udaya
error: Content is protected !!