23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಬೆಳ್ತಂಗಡಿ: ವಕೀಲರ ಸಂಘದ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ-200 ರಲ್ಲಿ ಸ್ವೀಪ್ ಸಮಿತಿಯಿಂದ ತಾಲೂಕಿನ 241 ಬಿಎಲ್ ಒ ಗಳಿಗೆ ತರಬೇತಿ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಎಸ್.ಎಸ್.ಎಲ್.ಸಿ. ಫಲಿತಾಂಶ: ಧರ್ಮಸ್ಥಳದ ಆಂಗ್ಲಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಅ.10-11: ಬಾಲಕರ ಹಾಗೂ ಬಾಲಕಿಯರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!