April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಜಾಗತಿಕ ವಿದ್ಯಮಾನಗಳು, ಅಭಿವೃದ್ಧಿ ಪೂರಕ ಯೋಜನೆಗಳು ಪರಿಸರವನ್ನು ಕಡೆಗಣಿಸಿವೆ. ಇದು ಭವಿಷ್ಯದ ಜನಾಂಗಕ್ಕೆ ಮಾರಕವಾಗಲಿದೆ. ಜ್ಞಾನಿ ಎನಿಸಿಕೊಂಡ ಮಾನವನಿಂದಲೇ ಪರಿಸರವು ಹಾನಿಗೆ ಒಳಗಾಗುತ್ತಿರುವುದು ವಿಪರ್ಯಾಸವಾಗಿದೆ. ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಪ್ರಕೃತಿಯ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಹಸಿರು ಭವಿಷ್ಯಕ್ಕಾಗಿ ನಮ್ಮ ಪಯಣ ನಿರಂತರವಾಗಬೇಕಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಪರಿಸರ ಸಂಘದ ಸಂಯೋಜಕರಾದ ಶ್ರೀಮತಿ ದೀಕ್ಷಾ , ಕುಮಾರಿ ಸ್ವಾತಿ ಉಪಸ್ಥಿತರಿದ್ದರು.
ಕುಮಾರಿ ವಿಭಾ ಸ್ವಾಗತಿಸಿದರು. ಅನ್ವಿತ್ ಧನ್ಯವಾದವಿತ್ತರು. ಕುಮಾರಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ಗೆ ನಾಮ ನಿರ್ದೇಶಿತ ಸದಸ್ಯರ ನೇಮಕ

Suddi Udaya

ಸುಳ್ಯ ಕೆರ್ಪಳ ಪಯಸ್ಸಿನಿ ಯುವಕ ಮಂಡಲ ವತಿಯಿಂದ ಲಕ್ಷ್ಮಿನಾರಾಯಣರವರಿಗೆ ಪಯಸ್ಸಿನಿ ಗೌರವ

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಪ್ರೌಢಶಾಲಾ ಬಾಲಕರ ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆ ದ್ವೀತಿಯ ಸ್ಥಾನ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಬೆಳ್ತಂಗಡಿ ಶಾಂತಾ ಬಂಗೇರರವರಿಗೆ ಸನ್ಮಾನ

Suddi Udaya
error: Content is protected !!