24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಜಾಗತಿಕ ವಿದ್ಯಮಾನಗಳು, ಅಭಿವೃದ್ಧಿ ಪೂರಕ ಯೋಜನೆಗಳು ಪರಿಸರವನ್ನು ಕಡೆಗಣಿಸಿವೆ. ಇದು ಭವಿಷ್ಯದ ಜನಾಂಗಕ್ಕೆ ಮಾರಕವಾಗಲಿದೆ. ಜ್ಞಾನಿ ಎನಿಸಿಕೊಂಡ ಮಾನವನಿಂದಲೇ ಪರಿಸರವು ಹಾನಿಗೆ ಒಳಗಾಗುತ್ತಿರುವುದು ವಿಪರ್ಯಾಸವಾಗಿದೆ. ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಪ್ರಕೃತಿಯ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಹಸಿರು ಭವಿಷ್ಯಕ್ಕಾಗಿ ನಮ್ಮ ಪಯಣ ನಿರಂತರವಾಗಬೇಕಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಪರಿಸರ ಸಂಘದ ಸಂಯೋಜಕರಾದ ಶ್ರೀಮತಿ ದೀಕ್ಷಾ , ಕುಮಾರಿ ಸ್ವಾತಿ ಉಪಸ್ಥಿತರಿದ್ದರು.
ಕುಮಾರಿ ವಿಭಾ ಸ್ವಾಗತಿಸಿದರು. ಅನ್ವಿತ್ ಧನ್ಯವಾದವಿತ್ತರು. ಕುಮಾರಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ನಗರ ಮಹಾಶಕ್ತಿಕೇಂದ್ರ ದಿಂದ ವಿಧಾನಸಭಾ ಚುನಾವಣಾ ಪೂರ್ವ ತಯಾರಿ ಸಭೆ

Suddi Udaya

ಕಲ್ಲೇರಿ: ನಿಸರ್ಗ ರಿಕ್ಷಾ ಚಾಲಕ – ಮಾಲಕರ ಸಂಘದ ವಾರ್ಷಿಕ ಮಹಾಸಭೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಬಾರ್ಯ: ಶ್ರೀ ಮಹಾವಿಷ್ಣುಯಾಗದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!