July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಜಾಗತಿಕ ವಿದ್ಯಮಾನಗಳು, ಅಭಿವೃದ್ಧಿ ಪೂರಕ ಯೋಜನೆಗಳು ಪರಿಸರವನ್ನು ಕಡೆಗಣಿಸಿವೆ. ಇದು ಭವಿಷ್ಯದ ಜನಾಂಗಕ್ಕೆ ಮಾರಕವಾಗಲಿದೆ. ಜ್ಞಾನಿ ಎನಿಸಿಕೊಂಡ ಮಾನವನಿಂದಲೇ ಪರಿಸರವು ಹಾನಿಗೆ ಒಳಗಾಗುತ್ತಿರುವುದು ವಿಪರ್ಯಾಸವಾಗಿದೆ. ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಪ್ರಕೃತಿಯ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಹಸಿರು ಭವಿಷ್ಯಕ್ಕಾಗಿ ನಮ್ಮ ಪಯಣ ನಿರಂತರವಾಗಬೇಕಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಪರಿಸರ ಸಂಘದ ಸಂಯೋಜಕರಾದ ಶ್ರೀಮತಿ ದೀಕ್ಷಾ , ಕುಮಾರಿ ಸ್ವಾತಿ ಉಪಸ್ಥಿತರಿದ್ದರು.
ಕುಮಾರಿ ವಿಭಾ ಸ್ವಾಗತಿಸಿದರು. ಅನ್ವಿತ್ ಧನ್ಯವಾದವಿತ್ತರು. ಕುಮಾರಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹಿರಿಯ ಸಹಕಾರಿ ಧುರೀಣ ಮಾಜಿ ಜಿ.ಪಂ. ಉಪಾಧ್ಯಕ್ಷ ನಿರಂಜನ ಬಾವಂತಬೆಟ್ಟು ನಿಧನ

Suddi Udaya

ನಾರಾವಿ:ಸಂತ ಅಂತೋನಿ ಶಿಕ್ಷಣ ಸಂಸ್ಥೆಯಲ್ಲಿ ಚಿಣ್ಣರ ಕಲರವ – ಕ್ರೀಡಾಸಂಗಮ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಧರ್ಮಸ್ಥಳ ಸಿಎ ಬ್ಯಾಂಕಿಗೆ ಸತತ 3 ನೇ ಬಾರಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರಿಪಳ್ಳ ಬಿಜೆಪಿಯ 30 ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ

Suddi Udaya
error: Content is protected !!