22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತಿನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಬಜಿರೆ: ಬಾಡಾರು ನಿವಾಸಿ ಶ್ರೀಮತಿ ಪ್ರೇಮ ಜೈನ್ ನಿಧನ

Suddi Udaya

ಚುನಾವಣಾ ಕಾನೂನು ಸುವ್ಯವಸ್ಥೆ, ಕಾಪಾಡುವ ಹಿತದೃಷ್ಟಿಯಿಂದ : ಎ.17 ಸೋಮವಾರ ಬೆಳ್ತಂಗಡಿ ಸಂತೆಕಟ್ಟೆ‌ಯಿಂದ ಬಸ್ ನಿಲ್ದಾಣದವರೆಗೆ ರಾಷ್ಟ್ರೀಯ ಹೆದ್ದಾರಿಯ ಇಕ್ಕೆಲಗಳಲ್ಲಿ ವ್ಯಾಪಾರ ನಿಷೇಧ

Suddi Udaya
error: Content is protected !!