September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕನ್ಯಾಡಿ-1: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ, ಮಂಗಳೂರು ಸಾಮಾಜಿಕ ಅರಣ್ಯ ವಿಭಾಗ, ಬೆಳ್ತಂಗಡಿಯ ಇವರ ವತಿಯಿಂದ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಸುಮಾರು 15 ಬಗೆಯ ಹಣ್ಣಿನ ಗಿಡಗಳನ್ನು ಶಾಲೆಯ ಆವರಣದಲ್ಲಿ ನೆಡಲಾಯಿತು.


ಸಾಮಾಜಿಕ ಅರಣ್ಯ ಬೆಳ್ತಂಗಡಿ ಇದರ ಉಪ ವಲಯ ಅರಣ್ಯ ಅಧಿಕಾರಿಗಳಾದ ಅಶೋಕ್ ಮಕ್ಕಳಿಗೆ ಅರಣ್ಯಗಳನ್ನು ಬೆಳೆಸುವುದರಿಂದ ಆಗುವ ಉಪಯೋಗಗಳನ್ನು ತಿಳಿಸಿಕೊಟ್ಟರು. ಶೇಖರ್ ಅರಣ್ಯ ವೀಕ್ಷಕರು, ನಡ ಹಾಗೂ ಅರಣ್ಯ ಸಿಬ್ಬಂದಿಯವರಾದ ದೀಕ್ಷಿತ್ ರವರು ಸಹಕರಿಸಿದರು.


ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ನೋಣಯ್ಯ ಗೌಡ ಇವರು ಉಪಸ್ಥಿತರಿದ್ದು ಎಲ್ಲಾ ಮಕ್ಕಳಿಗೆ ಸಿಹಿ ತಿಂಡಿಯನ್ನು ವಿತರಿಸಿದರು. ಎಸ್ ಡಿ.ಎಂ ಸಿ ಸದಸ್ಯ ರಘುಚಂದ್ರ ಶೆಟ್ಟಿ, ಮುಖ್ಯೋಪಾಧ್ಯಾಯರಾದ‌ ಹನುಮಂತರಾಯ, ಶಿಕ್ಷಕ ವಿಕಾಸ್ ಕುಮಾರ್ ವೈ, ಶಿಕ್ಷಕಿಯರಾದ ಶ್ರೀದೇವಿ, ಪ್ರಮೀಳಾ, ಹರಿತಾ ಉಪಸ್ಥಿತರಿದ್ದರು.

Related posts

ಉಜಿರೆ ರತ್ನಮಾನಸ ವಸತಿ ನಿಲಯದ ಮಕ್ಕಳಿಗೆ ಭತ್ತದ ಸಸಿ ತಯಾರಿ ಬಗ್ಗೆ ಪ್ರಾತ್ಯಕ್ಷಿಕೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಚಾರ್ಮಾಡಿ : ಎಸ್ಐಟಿ ತಂಡದ ಎಸ್ಪಿ ಮತ್ತು ಇತರ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನೋವಾ ಕಾರು ಪಲ್ಟಿ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,16,990 ಅಂತರದಿಂದ ಭಾರಿ ಮುನ್ನಡೆ

Suddi Udaya

ಚುನಾವಣಾ ನೀತಿ ಸಂಹಿತೆ ಹಿನ್ನೆಲೆ: ಚಾರ್ಮಾಡಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ- ಜಿಲ್ಲಾಧ್ಯಕ್ಷರ ಕಾರು ತಪಾಸಣೆ ನಡೆಸಿದ ಅಧಿಕಾರಿಗಳು

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya

ರೋಟರಿ ಸಮುದಾಯ ದಳ ಕಲ್ಮಂಜ ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!