25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ಪುತ್ತಿಗೆ ಮಠದ ಪೀಠಾಧೀಶ ಶ್ರೀ ಸುಗುಣೇಂದ್ರ ತೀರ್ಥ ಶ್ರೀಗಳರವರ ಭೇಟಿ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಜನರ ನೆಮ್ಮದಿ ಕೆಡಿಸಿದೆ ನೆಮ್ಮದಿ ಕೇಂದ್ರ: ಶೀಘ್ರವೇ ಬಾಜರು – ಜೋಡುಕಟ್ಟೆ ರಸ್ತೆ ದುರಸ್ತಿ – ಶಾಸಕ ಹರೀಶ್ ಪೂಂಜ

Suddi Udaya

ಕಸ್ತೂರಿರಂಗನ್ ವರದಿ ವಿರುದ್ಧವಾಗಿ ಚಾರ್ಮಾಡಿ ಗ್ರಾಮದಲ್ಲಿ ಹೋರಾಟ ಸಮಿತಿ ರಚನೆ

Suddi Udaya

ಆ.17 ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ವತಿಯಿಂದ ಮೊಸರು ಕುಡಿಕೆ ಉತ್ಸವ, ಪೂರ್ವಾಭಾವಿ ಸಭೆ

Suddi Udaya

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದ ಜಿಲ್ಲಾ ಪದಾಧಿಕಾರಿಗಳ ಆಯ್ಕೆ: ಗೌರವ ಅಧ್ಯಕ್ಷರಾಗಿ ಮನೋಹರ ಪ್ರಸಾದ್, ಜಿಲ್ಲಾ ಅಧ್ಯಕ್ಷರಾಗಿ ಇಸ್ಮಾಯಿಲ್ ಬಂಗಾಡಿ

Suddi Udaya
error: Content is protected !!