July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಎ ಗ್ರೇಡ್ ದೇವಸ್ಥಾನವಾಗಿ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನ

Suddi Udaya

ತುಂಡಾಗಿ ರಸ್ತೆಗೆ ಬಿದ್ದ ವಿದ್ಯುತ್ ತಂತಿ: ತಪ್ಪಿದ ಅನಾಹುತ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಕಬಡ್ಡಿ ಆಟಗಾರ ರಾಷ್ಟ್ರ ಮಟ್ಟದ ಪಂದ್ಯಾಟಕ್ಕೆ ಆಯ್ಕೆ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!