25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಅರಣ್ಯ ಅಧಿಕಾರಿಗಳಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

ಬೆಳ್ತಂಗಡಿ : ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ. ಹಾಗೂ ಅರಣ್ಯ ಅಧಿಕಾರಿಗಳಿಂದ ಗಿಡ ನಾಟಿ ಕಾರ್ಯಕ್ರಮವು ನಡ ವಿಭಾಗದ ಪಾಂಚಾರು ಅರಣ್ಯ ಪ್ರದೇಶದಲ್ಲಿ ಜೂ.5 ರಂದು ನಡೆಯಿತು.


ಉಪವಲಯ ಅರಣ್ಯಧಿಕಾರಿ ಕಿರಣ್ ಪಾಟೀಲ್ ಹಾಗೂ ಯೋಜನೆಯ ಲಾಯಿಲ ವಲಯದ ಮೇಲ್ವಿಚಾರಕರಾದ ಸುಶಾಂತ್ ರವರು ಗಿಡ ನಾಟಿಗೆ ಚಾಲನೆ ನೀಡಿ ಶುಭ ಹಾರೈಸಿದರು.

ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರು ಅರಣ್ಯ ಪ್ರದೇಶದ ಸುತ್ತ ಮುತ್ತ ಸುಮಾರು 50 ಕ್ಕೂ ಅಧಿಕ ವಿವಿಧ ರೀತಿಯ ಹಣ್ಣು ಹಂಪಲುಗಳ ಗಿಡಗಳನ್ನು ನಾಟಿ ಮಾಡಿದರು.

ಉಪವಲಯ ಅರಣ್ಯ ಅಧಿಕಾರಿಗಳಾದ ಕಿರಣ್ ಪಾಟೀಲ್ ರವರು ಶೌರ್ಯ ಸ್ವಯಂ ಸೇವಕರ ಸೇವೆಗೆ ಬಹಳ ಮೆಚ್ಚುಗೆ ವ್ಯಕ್ತಪಡಿಸಿ ವೈಡ್ ಲೈಫ್ ವತಿಯಿಂದ ಧರ್ಮಸ್ಥಳ ಯೋಜನೆಯ ಕಾರ್ಯಕ್ರಮಕ್ಕೆ ಶೌರ್ಯ ತಂಡದೊಂದಿಗೆ ನಾವು ಕೂಡ ಜೊತೆಯಲ್ಲಿದ್ದು ಸಹಕಾರ ನೀಡುತ್ತೇವೆಂದು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಉಪವಲಯ ಅರಣ್ಯಧಿಕಾರಿಗಳಾದ ಕಿರಣ್ ಪಾಟೀಲ್, ಗಸ್ತು ಅರಣ್ಯ ಪಾಲಕರಾದ ಹೇಮಂತ್ ಡಿ. ಪಿ , ರಾಘವೇಂದ್ರ, ಅರಣ್ಯ ವೀಕ್ಷಕರಾದ ವೀರಪ್ಪ , ಸುರೇಶ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್, ನಡ ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್, ಸ್ವಯಂ ಸೇವಕರಾದ ಜಯರಾಮ್, ಒಲ್ವಿನ್ ಡಿಸೋಜ, ಕೇಶವ ಉಪಸ್ಥಿತರಿದ್ದರು.

Related posts

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ

Suddi Udaya

ಸುಲ್ಕೇರಿಮೊಗ್ರು: ಭಾರಿ ಮಳೆಗೆ ಮನೆಯ ಕಂಪೌಂಡ್ ಕುಸಿತ

Suddi Udaya

ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ ಮತ್ತು ಯಕ್ಷಗಾನ ತರಬೇತಿ ತರಗತಿ ಉದ್ಘಾಟನೆ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಸುದ್ದಿ ಉದಯ ಪತ್ರಿಕೆ ಹಾಗೂ ದೀಪಾವಳಿ ವಿಶೇಷಾಂಕದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಚಿತ್ರನಟಿ ಶ್ರುತಿ

Suddi Udaya
error: Content is protected !!