ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಹುತ್ತಕ್ಕೆ ಕೈ ಹಾಕಿ ಜೇನು ತೆಗೆಯುವ ವೇಳೆ ವಿಷ ಜಂತು ಕಚ್ಚಿದ ಶಂಕೆ : ಚಿಕಿತ್ಸೆ ಪಡೆಯದೆ ವ್ಯಕ್ತಿ ಮೃತ್ಯು

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಹೆತ್ತವರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಧರ್ಮಸ್ಥಳ: ಕಲ್ಲೇರಿ ನಿವಾಸಿ ಲೀಲಾವತಿ ಗೌಡ ನಿಧನ

Suddi Udaya

ಫೆ.8: ಬೆನಕ ಆಸ್ಪತ್ರೆಯಿಂದ ಪಡಂಗಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉರುವಾಲು: ಹಲೇಜಿ ನಿವಾಸಿ ಮೋನಪ್ಪ ಮೂಲ್ಯ ನಿಧನ

Suddi Udaya

ಭಾರತೀಯ ಭೂ ಸೇನೆಯಲ್ಲಿ 20 ವರ್ಷ ಸೇವೆ ಸಲ್ಲಿಸಿ ನಿವೃತ್ತಿಗೊಂಡು ಊರಿಗೆ ಆಗಮಿಸಿದ ಯೋಧ ವಿಕ್ರಮ್ ಜೆ.ಎನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!