26.2 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

ಬೆಳ್ತಂಗಡಿ ತಾಲೂಕಿನಲ್ಲಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆಯನ್ನು ತಾಲೂಕು ಯೋಜನಾಧಿಕಾರಿ ಸುರೇಂದ್ರ ರವರು ದೀಪಬೆಳಗಿಸುವುದರ ಮೂಲಕ ಸಭೆಗೆ ಚಾಲನೆ ನೀಡಿದರು.

ಜ್ಞಾನವಿಕಾಸಕೇಂದ್ರದ ಹಿನ್ನೆಲೆ ಮತ್ತು ಮಹತ್ವದ ಬಗ್ಗೆ ವಾತ್ಸಲ್ಯ ಕಾರ್ಯಕ್ರಮದ ಬಗ್ಗೆ ತಿಳಿಸಿದರು. ಕೇಂದ್ರದ ಚಟುವಟಿಕೆಗಳು ಉತ್ತಮ ರೀತಿಯಲ್ಲಿ ನಡೆಸುವಂತೆ ಸೇವಾಪ್ರತಿನಿಧಿಯವರು ಜವಾಬ್ದಾರಿ ವಹಿಸುವಂತೆ ತಿಳಿಸಿದರು. ಜ್ಞಾನವಿಕಾಸ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿಯವರಾದ ಅಮೃತ ಕೇಂದ್ರ ನಿರ್ವಹಣೆಯಲ್ಲಿ ಸಂಯೋಜಕರ ಪಾತ್ರದ ಬಗ್ಗೆ ದಾಖಲಾತಿ ನಿರ್ವಹಣೆ ಬಗ್ಗೆ. ಕೇಂದ್ರದಲ್ಲಿ ಹಾಜರಾತಿ ಹೆಚ್ಚಿಸಲು ಆಕರ್ಷಸಣೀಯ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿವ ಬಗ್ಗೆ ಮಾಹಿತಿ ನೀಡಿದರು.

2024-25ನೇ ಸಾಲಿನ ಕ್ರಿಯಾಯೋಜನೆ ಕಾರ್ಯಕ್ರಮ ಗಳನ್ನು ಅನುಷ್ಠಾನಗೊಳಿಸುವ ಬಗ್ಗೆ ಮಾಹಿತಿ ನೀಡಿದರು. ಜಿಲ್ಲೆಯ ಗೌರವಾನ್ವಿತ ನಿರ್ದೇಶಕರಾದ ಮಹಾಬಲ ಕುಲಾಲ್ ರವರು ಕೇಂದ್ರದ ಚಟುವಟಿಕೆಗಳು ಉತ್ತಮವಾಗಿರುವಂತೆ ಯಾವ ರೀತಿ ಕಾರ್ಯಕ್ರಮವನ್ನು ನಡೆಸಬೇಕು. ವಿಶೇಷ ಕಾರ್ಯಕ್ರಮ ಅನುಷ್ಠಾನ ಮಾಡುವಾಗ ಸೇವಾಪ್ರತಿನಿಧಿಗಳು ಜವಾಬ್ದಾರಿ ವಹಿಸಬೇಕಾದ ಅಂಶಗಳ ಬಗ್ಗೆ ಸದಸ್ಯರ ಸಂಖ್ಯೆ ಕಡಿಮೆ ಇರುವ ಕೇಂದ್ರಕ್ಕೆ ಸದಸ್ಯರ ಸೇರ್ಪಡೆ ಮಾಡುವ ಬಗ್ಗೆ ತಿಳಿಸಿದರು. ಉಜಿರೆ ವಲಯ ಮೇಲ್ವಿಚಾರಕರಾದ ವನಿತಾ ರವರು ಕೇಂದ್ರದ ದಾಖಲಾತಿಗಳನ್ನು ಪರಿಶೀಲಿಸಿದರು. ಸಮನ್ವಯ ಅಧಿಕಾರಿ ಮಧುರಾ ವಸಂತ್ ಕಾರ್ಯಕ್ರಮ ನಿರೂಪಿಸಿ ಸೇವಾಪ್ರತಿನಿಧಿ ಪ್ರಮೀಳಾ ಸ್ವಾಗತಿಸಿದರು, .

Related posts

ಬೆಳ್ತಂಗಡಿ ತಾಲೂಕು ಪಂಚಾಯತ್ ನೂತನ ಕಟ್ಟಡ ಉದ್ಘಾಟನೆ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಜ್ಞಾಪನಾ ಶಕ್ತಿ ಪರೀಕ್ಷೆ ಸ್ಪರ್ಧೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya
error: Content is protected !!