ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

ಬೆಳ್ತಂಗಡಿ: ಮಾನವನ ಉನ್ನತ ಜೀವನಕ್ಕೆ ಪರಿಸರ ಪೂರಕವಾಗಿರುವಂತೆ ಪ್ರತಿಯೊಬ್ಬರು ಕಾಳಜಿ ವಹಿಸಬೇಕು ಎಂದು ವಾಣಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಜ್ವಲಾ ಡಿ ಆರ್ ಹೇಳಿದರು.


ಅವರು ವಾಣಿ ಪದವಿಪೂರ್ವ ಕಾಲೇಜಿನ ಪರಿಸರ ಸಂಘದ ಆಶ್ರಯದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, ಇಂದಿನ ಜಾಗತಿಕ ವಿದ್ಯಮಾನಗಳು, ಅಭಿವೃದ್ಧಿ ಪೂರಕ ಯೋಜನೆಗಳು ಪರಿಸರವನ್ನು ಕಡೆಗಣಿಸಿವೆ. ಇದು ಭವಿಷ್ಯದ ಜನಾಂಗಕ್ಕೆ ಮಾರಕವಾಗಲಿದೆ. ಜ್ಞಾನಿ ಎನಿಸಿಕೊಂಡ ಮಾನವನಿಂದಲೇ ಪರಿಸರವು ಹಾನಿಗೆ ಒಳಗಾಗುತ್ತಿರುವುದು ವಿಪರ್ಯಾಸವಾಗಿದೆ. ಸಂಪನ್ಮೂಲಗಳ ಸಮರ್ಪಕ ಬಳಕೆಯಿಂದ ಪ್ರಕೃತಿಯ ಉಳಿವು ಸಾಧ್ಯ. ಈ ನಿಟ್ಟಿನಲ್ಲಿ ಹಸಿರು ಭವಿಷ್ಯಕ್ಕಾಗಿ ನಮ್ಮ ಪಯಣ ನಿರಂತರವಾಗಬೇಕಿದೆ ಎಂದರು.


ಕಾಲೇಜಿನ ಪ್ರಾಂಶುಪಾಲರಾದ ಡಿ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ವಿಷ್ಣು ಪ್ರಕಾಶ್ ಎಂ, ಪರಿಸರ ಸಂಘದ ಸಂಯೋಜಕರಾದ ಶ್ರೀಮತಿ ದೀಕ್ಷಾ , ಕುಮಾರಿ ಸ್ವಾತಿ ಉಪಸ್ಥಿತರಿದ್ದರು.
ಕುಮಾರಿ ವಿಭಾ ಸ್ವಾಗತಿಸಿದರು. ಅನ್ವಿತ್ ಧನ್ಯವಾದವಿತ್ತರು. ಕುಮಾರಿ ಸ್ಪೂರ್ತಿ ಕಾರ್ಯಕ್ರಮ ನಿರೂಪಿಸಿದರು.

Related posts

ಕೊಡಿಂಬಾಡಿ ಶಿವ ಕಾಂಪ್ಲೆಕ್ಸ್‌ನಲ್ಲಿ ಲಲಿತ ಮೆಡಿಕಲ್ಸ್ ಸ್ಟೋರ್‍ಸ್ ಶುಭಾರಂಭ

Suddi Udaya

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಕೂಡುಜಾಲು ಪ್ರದೇಶದಲ್ಲಿ ಅಪಾಯಕಾರಿ ಫಲಕ ಅಳವಡಿಸಿದ ಮೇಲಂತಬೆಟ್ಟು ಗ್ರಾ.ಪಂ.

Suddi Udaya

ಕಚ್ಚೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿರ್ದೇಶಕರಾಗಿ ಮಡಂತ್ಯಾರಿನ ಜಿ. ಬಾಲಕೃಷ್ಣ ಭಂಡಾರಿ ಆಯ್ಕೆ

Suddi Udaya

ಏ.2-10: ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರೆಖ್ಯ : 24 ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
error: Content is protected !!